SHIVAMOGGA LIVE | 4 JUNE 2023
SHIMOGA : ಕೋಳಿ ಫಾರಂ ತೆರವು ಕಾರ್ಯಾಚರಣೆ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ (Labor) ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆನ್ನು ಮೂಳೆ, ಎದೆ ಭಾಗದ ಕೆಲವು ಮೂಳೆಗಳು ಮುರಿದಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿಯ ಮತ್ತಿಘಟ್ಟದ ಮಂಜುನಾಥ, ಗಾಯಗೊಂಡ ಕಾರ್ಮಿಕ (Labor). ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿಯಲ್ಲಿ ಕೋಳಿ ಫಾರಂ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿಸಿದೆ. ಕಟ್ಟಡ ತೆರವು ಮಾಡಲು ಮೇಲೆ ಹತ್ತಿದ್ದಾಗ ಸಿಮೆಂಟ್ ಶೀಟ್ ಮುರಿದಿದ್ದು ಮಂಜುನಾಥ್ ಕೆಳಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆಕ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ – ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್ ಕಿರಣ್ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?
ಸುರಕ್ಷಿತ ಕ್ರಮಗಳನ್ನು ಅನುಸರಿಸದ ಹಿನ್ನೆಲೆ ಕಟ್ಟಡದ ಮಾಲೀಕ ಮತ್ತು ತೆರವು ಕಾರ್ಯಾಚರಣೆಯ ಮೇಸ್ತ್ರಿ ಹಮೀದ್ ಎಂಬುವವರ ವಿರುದ್ಧ ದೂರು ನೀಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ