ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ರಾತ್ರಿ ಲಾಠಿ ಚಾರ್ಜ್‌, ಕಾರಣವೇನು?

SHIMOGA CITY: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಶಿವಮೊಗ್ಗದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೆಲವು ಆರ್‌ಸಿಬಿ ಅಭಿಮಾನಿಗಳು ಲಾಠಿ ಏಟು ತಿಂದು ಮನೆಗೆ ಮರಳಿದ್ದಾರೆ.

ಶಿವಮೊಗ್ಗ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಕಳೆದ ರಾತ್ರಿ ಸಂಭ್ರಮಾಚರಣೆ ವೇಳೆ ಲಘು ಲಾಠಿ ಪ್ರಹಾರ ನಡೆದಿದೆ.

Lathi-Charge-in-Shimoga-during-RCB-Winning-Celebration

ಎ.ಎ. ಸರ್ಕಲ್‌ನಲ್ಲಿ ಆಗಿದ್ದೇನು?

ಐಪಿಎಲ್‌ ಫೈನಲ್‌ ಪಂದ್ಯಾವಳಿ ಹಿನ್ನೆಲೆ ಎ.ಎ. ಸರ್ಕಲ್‌ನಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಆರ್‌ಸಿಬಿ ಪಂದ್ಯ ಗೆಲ್ಲುತ್ತಿದ್ದಂತೆ ಯುವಕರು ಎ.ಎ.ಸರ್ಕಲ್‌ನಲ್ಲಿ ಬೈಕ್‌ ಜಾಥಾ ನಡೆಸಿದರು. ಕೆಲವರು ಪಟಾಕಿ ಸಿಡಿಸಿದರು. ಇದೇ ವೇಳೆ ಕೆಲವು ಯುವಕರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ಗಳನ್ನು ತಡೆದು ಸಂಭ್ರಮಾಚರಣೆಗೆ ಮುಂದಾದರು.

ಪೊಲೀಸ್‌ ಎಚ್ಚರಿಕೆ ಮೀರಿ ರಸ್ತೆ ತಡೆ

ಬಿ.ಹೆಚ್‌.ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ಸುಗಳು, ವಾಹನಗಳನ್ನು ತಡೆಯದಂತೆ ಪೊಲೀಸರು ಎಚ್ಚರಿಸಿದರು. ಆದರೆ ಕೆಲವು ಯುವಕರು ಇದನ್ನು ಮೀರಿ ರಸ್ತೆ ತಡೆದು ಕುಣಿಯಲು ಆರಂಭಿಸಿದರು. ಈ ವೇಳೆ ಪೊಲೀಸರು ಯುವಕರನ್ನು ರಸ್ತೆಯಿಂದ ಸೈಡಿಗೆ ಸರಿಸಲು ಯತ್ನಿಸಿದರು. ಆಗ ನೂಕಟ ತಳ್ಳಾಟವಾಯಿತು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದರು.

Kalleshwara-Enterprises.webp

ಕಳೆದ ಪಂದ್ಯಾವಳಿ ವೇಳೆಯು ಲಾಠಿ ಏಟು

ಕಳೆದ ಐಪಿಎಲ್‌ ಪಂದ್ಯಾವಳಿಯ ಸಂಭ್ರಮಾಚರಣೆ ವೇಳೆಯು ಶಿವಮೊಗ್ಗಲ್ಲಿ ಲಾಠಿ ಚಾರ್ಜ್‌ ಆಗಿತ್ತು. ಗೋಪಿ ಸರ್ಕಲ್‌ನಲ್ಲಿ ಯುವಕರನ್ನು ಚದುರಿಸಲು ಲಾಠಿ ಚಾರ್ಜ್‌ ನಡೆಸಲಾಗಿತ್ತು. ಈ ಬಾರಿಯು ಕೆಲವು ಯುಕವರ ಅತಿರೇಖರದ ವರ್ತನೆ ಹಿನ್ನೆಲೆ ಹಲವರಿಗೆ ಲಾಠಿ ಏಟು ಬೀಳುವಂತಾಯಿತು.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp