Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಆರ್‌ಸಿಬಿ ಅಬ್ಬರ, ಶಿವಮೊಗ್ಗದಲ್ಲಿ ದೀಪಾವಳಿ ರೀತಿ ಸಂಭ್ರಮ, ಲಘು ಲಾಠಿ ಪ್ರಹಾರ, ಇಲ್ಲಿದೆ ಫಟಾಫಟ್‌ ಸುದ್ದಿ

ಆರ್‌ಸಿಬಿ ಅಬ್ಬರ, ಶಿವಮೊಗ್ಗದಲ್ಲಿ ದೀಪಾವಳಿ ರೀತಿ ಸಂಭ್ರಮ, ಲಘು ಲಾಠಿ ಪ್ರಹಾರ, ಇಲ್ಲಿದೆ ಫಟಾಫಟ್‌ ಸುದ್ದಿ

04/06/2025 11:16 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಐಪಿಎಲ್‌ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ವಿವಿಧೆಡೆ ಯುವಕರು ರಸ್ತೆಗಿಳಿದು ಘೋಷಣೆಗಳನ್ನು ಮೊಳಗಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ ಗುಂಪು ಚದುರಿಸಲು ಲಘು ಲಾಠಿ (lathi charge) ಪ್ರಹಾರವು ನಡೆಯಿತು. 

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಬೃಹತ್‌ ಪರದೆಗಳಲ್ಲಿ ಪಂದ್ಯಾವಳಿ ವೀಕ್ಷಣೆ

ಐಪಿಎಲ್‌ ಫೈನಲ್‌ ಪಂದ್ಯಾವಳಿ ವೀಕ್ಷಣೆಗೆ ಶಿವಮೊಗ್ಗದ ವಿವಿಧೆಡೆ ಬೃಹತ್‌ ಪರದೆಗಳನ್ನು ಹಾಕಲಾಗಿತ್ತು. ಆರ್‌ಸಿಬಿ ಅಭಿಮಾನಿಗಳು ಈ ಪರದೆಗಳಲ್ಲಿ ಪಂದ್ಯಾವಳಿ ವೀಕ್ಷಿಸಿದರು. ಆರ್‌ಸಿಬಿ ತಂಡ ಫೋರ್‌, ಸಿಕ್ಸ್‌ ಬಾರಿಸಿದಾಗ, ಆರ್‌ಸಿಬಿ ಬೌಲರ್‌ಗಳು ವಿಕೆಟ್‌ ಪಡೆದಾಗ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು.

RCB Winning Celebration In Shimoga city

ಕ್ಲಬ್‌, ಬಾರ್‌ಗಳಲ್ಲಿ ಟೇಬಲ್‌ ಫುಲ್‌

ನಗರದ ವಿವಿಧ ಕ್ಲಬ್‌ಗಳು, ಬಾರ್‌ಗಳಲ್ಲಿ ಪಂದ್ಯಾವಳಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಹತೇಕ ಟೇಬಲ್‌ಗಳು ಭರ್ತಿಯಾಗಿದ್ದವು. ಆರ್‌ಸಿಬಿ ಗೆಲುವಿಗೆ ಮುಂದಡಿ ಇಡುತ್ತಿದ್ದಂತೆ ಸಂಭ್ರಮಾಚರಣೆ ಇರುತ್ತಿತ್ತು. ಈ ಅವಧಿಯಲ್ಲಿ ಮದ್ಯ ಮಾರಾಟವು ಬಿರುಸಾಗಿತ್ತು.

ರಸ್ತೆಗಿಳಿದು ಸಂಭ್ರಮಾಚರಣೆ

ಆರ್‌ಸಿಬಿ ಗೆಲುವಿನ ಸನಿಹಕ್ಕೆ ಬರುತ್ತಿದ್ದಂತೆ ಯುವಕರು ಶಿವಮೊಗ್ಗ ನಗರದಲ್ಲಿ ಸಂಭ್ರಮಾಚರಣೆ ಆರಂಭಿಸಿದರು. ನಗರದ ವಿವಿಧೆಡೆ ರಸ್ತೆಗಿಳಿದ ಆರ್‌ಸಿಬಿ ಅಭಿಮಾನಿಗಳು ಘೋಷಣೆಗಳನ್ನು ಕೂಗಿದರು, ಬೈಕ್‌ ಜಾಥಾ ನಡೆಸಿದರು. ವಿವಿಧೆಡೆ ದಿಢೀರ್‌ ರಸ್ತೆಗಿಳಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

RCB Winning Celebration In Shimoga city

ನಡುರಾತ್ರಿ ದೀಪಾವಳಿ ರೀತಿ ಸಂಭ್ರಮ

ಆರ್‌ಸಿಬಿ ತಂಡ ಗೆಲ್ಲುತ್ತಿದ್ದಂತೆ ಶಿವಮೊಗ್ಗ ನಗರದಾದ್ಯಂತ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಬಹುತೇಕ ಎಲ್ಲ ಬಡಾವಣೆಗಳಲ್ಲಿಯು ಪಟಾಕಿ ಸಿಡಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ನಡುರಾತ್ರಿ ದೀಪಾವಳಿ ರೀತಿಯ ಸಂಭ್ರಮಾಚರಣೆ ಮಾಡಲಾಯಿತು.

RCB Winning Celebration In Shimoga city

ಲಘು ಲಾಠಿ ಪ್ರಹಾರ

ನೆಹರು ರಸ್ತೆಯಲ್ಲಿ ವಿಜಯೋತ್ಸವದ ಸಂದರ್ಭ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಆರ್‌ಸಿಬಿ ಅಭಿಮಾನಿಗಳು ತಡರಾತ್ರಿವರೆಗು ಸಂಭ್ರಮಾಚರಣೆ ಮಾಡಿದರು. ಸಮಯ ಮೀರಿದ್ದರಿಂದ ಪೊಲೀಸರು ಗುಂಪು ಚದುರಿಸಲು ಪ್ರಯತ್ನಿಸಿದರು. ಆದರೆ ಜನರು ತೆರಳದೆ ಇದ್ದಾಗ ಲಘು ಲಾಠಿ ಪ್ರಹಾರ ನಡೆಸಿದರು.

RCB Winning Celebration In Shimoga city

ಸಿಟಿಯಲ್ಲಿ ಬಂದೋಬಸ್ತ್‌ ಹೆಚ್ಚಳ

ಐಪಿಎಲ್‌ ಫೈನಲ್‌ ಪಂದ್ಯಾವಳಿ ಹಿನ್ನೆಲೆ ನಗರದ ವಿವಿಧೆಡೆ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿತ್ತು. ಹೀಗಿದ್ದು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

RCB Winning Celebration In Shimoga city

ಬೈಕ್‌ ಅಪಘಾತದಲ್ಲಿ ಅಭಿಮಾನಿ ಸಾವು

ಉಷಾ ನರ್ಸಿಂಗ್‌ ಹೋಮ್‌ ಸಮೀಪ ಬೈಕ್‌ಗಳು ಡಿಕ್ಕಿಯಾಗಿ ಆರ್‌ಸಿಬಿ ಅಭಿಮಾನಿಯೊಬ್ಬ ಸಾವನ್ನಪ್ಪಿದ್ದಾನೆ. ವೆಂಕಟೇಶ ನಗರದ ಅಭಿ (21) ಮೃತಪಟ್ಟಿದ್ದಾನೆ. ಗಣಪತಿ ದೇವಸ್ಥಾನದ ಪಕ್ಕದಲ್ಲಿ 100 ಅಡಿ ರಸ್ತೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Accident-near-usha-nursing-home-circle-in-Shimoga.

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ

ವಿಜಯೋತ್ಸವ ಸಂದರ್ಭ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ವಾಹನ ಡಿಕ್ಕಿ ಹೊಡೆದಿದೆ. ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಕಾಟನ್‌ ಜಗದೀಶ್‌ ಎಂಬುವವರು ನಿಲ್ಲಿಸಿದ್ದ ಕಾರಿಗೆ ರಾತ್ರಿ ವಾಹನ ಡಿಕ್ಕಿ ಹೊಡೆದಿದೆ. ಇನ್ನು, ನಗರದ ವಿವಿಧೆಡೆ ರಸ್ತೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದಿರುವುದು ಕೂಡ ವರದಿಯಾಗಿದೆ. ರಸ್ತೆಯಲ್ಲಿ ವಾಹನಗಳನ್ನು ತಡೆದು, ಬಸ್ಸುಗಳನ್ನು ಅಡ್ಡಗಟ್ಟಲಾಗಿದೆ.

RCB Winning Celebration In Shimoga city

ಜಿಲ್ಲೆಯ ವಿವಿಧೆಡೆಯು ವಿಜಯೋತ್ಸವ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಆರ್‌ಸಿಬಿ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ಈ ಸಲ ಕಪ್‌ ನಮ್ದು ಎಂದು ಘೋಷಣೆ ಕೂಗತ್ತ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಹಳ್ಳಿ, ಹಳ್ಳಿಗಳಲ್ಲು ಆರ್‌ಸಿಬಿ ಅಭಿಮಾನಗಳು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

RCB Winning Celebration In Shimoga city

ಜನಪ್ರತಿನಿಧಿಗಳ ಸಂಭ್ರಮ

ಆರ್‌ಸಿಬಿ ಗೆಲುವನ್ನು ಶಿವಮೊಗ್ಗದ ಜನಪ್ರತಿನಿಧಿಗಳು ಕೂಡ ಸಂಭ್ರಮಿಸಿದ್ದಾರೆ. ಸಂಸದ ರಾಘವೇಂದ್ರ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ‘ಈ ಸಲ ಕಪ್‌ ನಮ್ದೆ. ಆರ್‌ಸಿಬಿ ತಂಡಕ್ಕೆ ಶುಭಾಶಯ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಪ್ರಾರ್ಥನೆಗಳು, ಜಯಘೋಷಗಳು, ಅಚಲ ನಿಷ್ಠೆ – ಇವೆಲ್ಲವೂ ಈ ಕ್ಷಣಕ್ಕಾಗಿಯೇ. 18 ವರ್ಷಗಳ ದೀರ್ಘ ಕಾತುರದ ನಂತರ, RCB ಅಂತಿಮವಾಗಿ IPL ಚಾಂಪಿಯನ್ಸ್ ಆಗಿದೆ.ಮಧು ಬಂಗಾರಪ್ಪ, ಸಚಿವ

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

18 ವರ್ಷಗಳ ಕನ್ನಡಿಗರ ಕಾಯುವಿಕೆ, ದೇಶದ ಕ್ರಿಕೆಟ್ ಅಭಿಮಾನಿಗಳ ಹಾರೈಕೆಗೆ ತಕ್ಕ ಪ್ರತಿಫಲ ದೊರೆತಿದೆ. ತಮ್ಮ ನಿರಂತರ ಪರಿಶ್ರಮ ಹಾಗೂ ವಿರೋಚಿತ ಆಟದೊಂದಿಗೆ ಕನ್ನಡಿಗರ ಮನೆ ಮನ ಗೆದ್ದ ಪ್ರತಿಯೊಬ್ಬ ಆರ್.ಸಿ.ಬಿ ಆಟಗಾರರಿಗೂ ಅನಂತ ಅಭಿನಂದನೆಗಳು. ಈಗ ವಿಶ್ವ ಕ್ರಿಕೆಟ್ ಪ್ರೇಮಿಗಳೂ ಸಂಭ್ರಮಿಸಿ ಹೇಳುತ್ತಿದ್ದಾರೆ ‘ಕಪ್ ನಮ್ಮದೇ’ ಎಂದು.ಬಿ.ವೈ.ವಿಜಯೇಂದ್ರ, ಶಾಸಕ

Toyota-demo-car-sale.

ಕಾಯುವಿಕೆ ಮುಗಿಯಿತು. ಆರ್‌ಸಿಬಿ 2025ರ ಚಾಂಪಿಯನ್‌. ಅದ್ಭುತ ಪಂದ್ಯ. ಅದ್ಭುತ ತಂಡ. ಈ ಸಲ ಕಪ್‌ ನಮ್ದೆ.ಆರಗ ಜ್ಞಾನೇಂದ್ರ, ಶಾಸಕ

ಆರ್‌ಸಿಬಿ ತಂಡದ ಅಭೂತಪೂರ್ವ ಪ್ರದರ್ಶನದಿಂದ, ವೀರೋಚಿತ ಗೆಲುವಿನೊಂದಿಗೆ ದಶಕಗಳ ಕನ್ನಡಿಗರ ಕನಸು ಇಂದು ಈಡೇರಿದೆ. ರೋಚಕ ಪಂದ್ಯದಲ್ಲಿ ಚಾಲೆಂಜಿಂಗ್ ಪ್ರದರ್ಶನ ನೀಡಿದ ಆರ್.ಸಿ.ಬಿ ತಂಡದ ಪ್ರತಿಯೊಬ್ಬ ಆಟಗಾರನೂ ಅಭಿನಂದನಾರ್ಹ.ಬೇಳೂರು ಗೋಪಾಲಕೃಷ್ಣ, ಶಾಸಕ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕನ್ನಡಿಗರ ಮನೆ-ಮನ ಗೆದ್ದ ನಮ್ಮ ಆರ್.ಸಿ.ಬಿ. ಮೊಟ್ಟ ಮೊದಲ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿದಿರುವ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಾರ್ದಿಕ ಅಭಿನಂದನೆಗಳು.ಎಸ್‌.ಎನ್.ಚನ್ನಬಸಪ್ಪ, ಶಾಸಕ

ಸತತ 18 ವರ್ಷಗಳ ಪರಿಶ್ರಮಕ್ಕೆ ಫಲ ದೊರಕಿದೆ. ಕನ್ನಡಿಗರ ಬಹುದೊಡ್ಡ ಕನಸನ್ನು ನನಸು ಮಾಡಿದ ರಾಯಲ್ ಚಾಲೆಂರ್ಜಸ್ ಬೆಂಗಳೂರು ತಂಡದ ಪ್ರತಿಯೊಬ್ಬ ಕ್ರೀಡಾಪಟುವಿಗೆ ಧನ್ಯವಾದಗಳು.ಶಾರದಾ ಪೂರ್ಯಾನಾಯ್ಕ್‌, ಶಾಸಕಿ

ಇದನ್ನೂ ಓದಿ » ಜೈಲಿಂದ ಹೊರ ಬಂದು ತಿಂಗಳೊಳಗೆ ಸಚಿನ್‌ ಕಾಲಿಗೆ ಗುಂಡು, ಮತ್ತೆ ಅರೆಸ್ಟ್‌ ಆದ ಶ್ಯಾಡೋ, ಏನಿದು ಕೇಸ್‌?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Accident-near-usha-nursing-home-circle-in-Shimoga. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ, ಶಿವಮೊಗ್ಗದಲ್ಲಿ ಯುವಕ ಸಾವು
Next Article havaldar-ramesh-welcomed-at-shimoga-railway-station ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ಇದನ್ನೂ ಓದಿ

Lokayukta-raid-gold-found-at-Professors-house.
SHIVAMOGGA CITY

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?