ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021
ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ.
ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು.
ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು?
ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು ವಿಶ್ವವಿದ್ಯಾಲಯವು ಪರೀಕ್ಷೆ ನಡೆಸಲು ಮುಂದಾಗಿದೆ. ಕರ್ನಾಟಕ ಉಚ್ಛಾ ನ್ಯಾಯಾಲಯದ ತೀರ್ಪು ಲೆಕ್ಕಿಸದೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಕಾನೂನು ವಿವಿಯ ನಡೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದರು.
ಚಿನ್ಮಯ್, ನಂದೀಶ್, ದುಷ್ಯಂತ, ರಶ್ಮೀ, ಯಶಸ್ವಿನಿ, ಮಾನಸ, ಗೌತಮ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಈ ಸಂದರ್ಭ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200