ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

Published On : ಡಿಸೆಂಬರ್ 23, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021

ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು.

ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು?

ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು ವಿಶ್ವವಿದ್ಯಾಲಯವು ಪರೀಕ್ಷೆ ನಡೆಸಲು ಮುಂದಾಗಿದೆ. ಕರ್ನಾಟಕ ಉಚ್ಛಾ ನ್ಯಾಯಾಲಯದ ತೀರ್ಪು ಲೆಕ್ಕಿಸದೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಕಾನೂನು ವಿವಿಯ ನಡೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದರು.

ಚಿನ್ಮಯ್, ನಂದೀಶ್, ದುಷ್ಯಂತ, ರಶ್ಮೀ, ಯಶಸ್ವಿನಿ, ಮಾನಸ, ಗೌತಮ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಈ ಸಂದರ್ಭ ಇದ್ದರು.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 23, 2021

Leave a Comment