ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ಆಯೋಜಿಸಿದ್ದ ಮೆರವಣಿಗೆಯಲ್ಲಿ ಎಲ್ಎಡಿ ಸ್ಕ್ರೀನ್ ಬಿದ್ದು ಪತ್ರಕರ್ತ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಬೃಹತ್ ಎಲ್ಇಡಿ ಪರದೆಗಳ ಮೂಲಕ ಮೆರವಣಿಗೆಯ ನೇರ ಪ್ರಸಾರ ಮಾಡಲಾಗುತ್ತಿತ್ತು. ಕ್ಯಾಂಟರ್ ಲಾರಿಗಳಲ್ಲಿ ಎಲ್ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಟಿವಿ ವಾಹಿನಿ ಪತ್ರಕರ್ತ ವಿನಯ್ ಪುರದಾಳು ಮತ್ತು ಕಾಂಗ್ರೆಸ್ ಪಕ್ಷದ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಪತ್ರಕರ್ತ ವಿನಯ್ ಪುರದಾಳು ಅವರ ಬೆನ್ನಿಗೆ ಗಾಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಒಬ್ಬರ ತಲೆಗೆ ಪೆಟ್ಟು ಬಿದ್ದಿದೆ. ಮತ್ತೊಬ್ಬರ ಕಾಲಿಗೆ ಗಾಯವಾಗಿದೆ. ಕೂಡಲೆ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ, ಯಾರೆಲ್ಲ ಜೊತೆಗಿದ್ದರು?
LATEST NEWS
- ಇವತ್ತು ದೀನಬಂಧು ಟ್ರಸ್ಟ್ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

- ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

- ಸೊರಬಕ್ಕೆ ನೂತನ ಜಲವಾಹನ, ಪೊಲೀಸ್ ಜೀಪ್ಗಳು

- ‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

- ವೀರಶೈವ ತಂಡಕ್ಕೆ ಶ್ರೀಕಾಂತಣ್ಣ ಕ್ರಿಕೆಟ್ ಕಪ್, ರನ್ನರ್ ಅಪ್ ಯಾರು?

About The Editor
ನಿತಿನ್ ಆರ್.ಕೈದೊಟ್ಲು
















