ಗಾಂಧಿ ಬಜಾರ್‌ನಲ್ಲಿ ಕಾಂಗ್ರೆಸ್‌ ಮೆರವಣಿಗೆ ವೇಳೆ ಬಿದ್ದ ಎಲ್‌ಇಡಿ ಪರದೆ, ಪತ್ರಕರ್ತ ಸೇರಿ ಮೂವರಿಗೆ ಗಾಯ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | 15 APRIL 2024

ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆ ಆಯೋಜಿಸಿದ್ದ ಮೆರವಣಿಗೆಯಲ್ಲಿ ಎಲ್‌ಎಡಿ ಸ್ಕ್ರೀನ್‌ ಬಿದ್ದು ಪತ್ರಕರ್ತ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ಮೆರವಣಿಗೆಯ ನೇರ ಪ್ರಸಾರ ಮಾಡಲಾಗುತ್ತಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಟಿವಿ ವಾಹಿನಿ ಪತ್ರಕರ್ತ ವಿನಯ್‌ ಪುರದಾಳು ಮತ್ತು ಕಾಂಗ್ರೆಸ್‌ ಪಕ್ಷದ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಪತ್ರಕರ್ತ ವಿನಯ್‌ ಪುರದಾಳು ಅವರ ಬೆನ್ನಿಗೆ ಗಾಯವಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರ ಪೈಕಿ ಒಬ್ಬರ ತಲೆಗೆ ಪೆಟ್ಟು ಬಿದ್ದಿದೆ. ಮತ್ತೊಬ್ಬರ ಕಾಲಿಗೆ ಗಾಯವಾಗಿದೆ. ಕೂಡಲೆ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ, ಯಾರೆಲ್ಲ ಜೊತೆಗಿದ್ದರು?

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಏಪ್ರಿಲ್ 15, 2024

Leave a Comment