SHIVAMOGGA LIVE | 1 AUGUST 2023
SHIMOGA : ಜಿಲ್ಲೆಯಾದ್ಯಂತ ಮಳೆ ಕಾಣೆಯಾಗಿದ್ದು (Less Rainfall) ಬಿಸಿಲು ಆವರಿಸಿದೆ. ಸದ್ಯ ಶಿವಮೊಗ್ಗದಲ್ಲಿ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜೋರು ಮಳೆಯಾಗಬೇಕಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಮಳೆ ಸಂಪೂರ್ಣ ಕ್ಷೀಣಿಸಿದ್ದು (Less Rainfall) ಅಲ್ಲಲ್ಲಿ ಚದುರಿದಂತೆ ಸುರಿಯುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 8.97 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ ಒಂದು ಮಿ.ಮೀ.ಗಿಂತಲೂ ಕಡಿಮೆಯಾಗಿದೆ.

PHOTO : ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಛತ್ರಿ ಹಿಡಿದು ನಡೆದು ಸಾಗುತ್ತಿರುವುದು.
ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 5.20 ಮಿ.ಮೀ, ಭದ್ರಾವತಿ 0.90 ಮಿ.ಮೀ, ತೀರ್ಥಹಳ್ಳಿ 15.90 ಮಿ.ಮೀ, ಸಾಗರ 16.20 ಮಿ.ಮೀ, ಶಿಕಾರಿಪುರ 2.90 ಮಿ.ಮೀ, ಸೊರಬ 5.20 ಮಿ.ಮೀ, ಹೊಸನಗರ 16.50 ಮಿ.ಮೀ ಮಳೆಯಾಗಿದೆ.
ಹೆಚ್ಚಾಯ್ತು ತಾಪಮಾನ
ಜಿಲ್ಲೆಯ ಅಲ್ಲಲ್ಲಿ ಚದುರಿದ ಹಾಗೆ ಮಳೆ ಸುರಿಯುತ್ತಿದೆ. ಕೆಲವು ಕ್ಷಣ ಮಳೆ ಜೋರಾಗಿ ಬಂದು ಮರೆಯಾಗುತ್ತಿದೆ. ಬಿಸಿಲ ಝಳ ಜೋರಾಗಿದ್ದು, ತಾಪಮಾನ ಏರಿಕೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕನಿಷ್ಠ 26 ಡಿಗ್ರಿಯಿಂದ ಗರಿಷ್ಠ 28 ಡಿಗ್ರಿವೆರೆಗೆ ತಾಪಮಾನ ಇದೆ. ಮಳೆಗಾಲದಲ್ಲಿ ಮಳೆಯಿಂದ ರಕ್ಷಣೆಗೆ ಛತ್ರಿ ಬಳಸುವ ಬದಲು ಜನ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಲು ಬಳಕೆ ಮಾಡುತ್ತಿದ್ದಾರೆ.
ಜಲಾಯಶಯಗಳ ಒಳ ಹರಿವು ಕುಸಿತ
ಮಳೆ ಕಡಿಮೆ ಆಗಿರುವುದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಲಿಂಗನಮಕ್ಕಿ ಜಲಾಶಯಕ್ಕೆ 13,660 ಕ್ಯೂಸೆಕ್ ಮಾತ್ರ ಒಳ ಹರಿವು ಇದೆ. ನೀರಿನ ಮಟ್ಟ 1787.9 ಅಡಿಗೆ ತಲುಪಿದೆ. ಭದ್ರಾ ಜಲಾಶಯಕ್ಕೆ 5756 ಕ್ಯೂಸೆಕ್ ಒಳ ಹರಿವು ಇದ್ದು, ನೀರಿನ ಮಟ್ಟ 162.8 ಅಡಿಗೆ ಏರಿಕೆಯಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು 10,493 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.
.jpeg)
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





