ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಯಿಂದ ಕೈಬಿಡುವಂತೆ ಸುಪ್ರೀಂ ಕೊರ್ಟ್ ಆದೇಶ ನೀಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪತ್ರ ಚಳವಳಿ ನಡೆಸಲಾಯಿತು.
ಏನಿದು ಪತ್ರ ಚಳವಳಿ?
ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಜಾರ ಸಮುದಾಯ ಒತ್ತಾಯಿಸಿದೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಮತ್ತು ತಾಂಡಗಳಲ್ಲಿ ಇರುವ ಬಂಜಾರ ಸಮುದಾಯದವರು ಪತ್ರ ಬರೆದಿದ್ದು, ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದೆ.
ಎಂಎಲ್ಎ ನೇತೃತ್ವದಲ್ಲಿ ಮೆರವಣಿಗೆ
ಶಾಸಕ ಅಶೋಕ್ ನಾಯ್ಕ್ ನೇತೃತ್ವದಲ್ಲಿ ಎಂಎಲ್ಎ ಕಚೇರಿಯಿಂದ ಮೆರವಣಿಗೆ ನಡೆಸಿದ ಬಂಜಾರ ಸಮುದಾಯದ ಪ್ರಮುಖರು, ಗೋಪಿ ಸರ್ಕಲ್ ಬಳಿ ಇರುವ ಅಂಚೆ ಇಲಾಖೆಯಲ್ಲಿ ಪತ್ರ ಚಳವಳಿ ನಡೆಸಿದರು.

ಮತ್ತೊಂದೆಡೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ನೇತೃತ್ವದಲ್ಲೂ ಪತ್ರ ಚಳವಳಿ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಪ್ರಮುಖರು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200