ಸಾಗರ: ಹೊಸನಗರ ತಾಲ್ಲೂಕು ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಸತೀಶ್ ಶೆಟ್ಟಿ ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್ ಮತ್ತು ಕೃಷ್ಣ ಎಂಬವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ
ಸತೀಶ್ ಶೆಟ್ಟಿ ಅವರು ಫಯಾಜ್ ಹಾಗೂ ಕೃಷ್ಣ ಅವರೊಂದಿಗೆ ಗಾರೆ ಕೆಲಸ ಮಾಡುತ್ತಿದ್ದರು. ಕೂಲಿ ಹಣ ಪಾವತಿಸುವ ವಿಚಾರದಲ್ಲಿ ಮೂವರ ನಡುವೆ ಮನಸ್ತಾಪ ಉಂಟಾಗಿತ್ತು. 2021ರ ಡಿ.22ರಂದು ಅಪರಾಧಿಗಳು ಸತೀಶ್ ಶೆಟ್ಟಿ ಅವರನ್ನು ಅಮೃತ ಗ್ರಾಮದ ಕೆಳಗಿನ ಕೆರೆಯ ದಂಡೆಗೆ ಕರೆದುಕೊಂಡು ಹೋಗಿ ಕತ್ತಿ ಮತ್ತು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದರು.
ಅನುಮಾನ ಬರಬಾರದು ಎಂದು ಶವವನ್ನು ಕೆರೆಗೆ ಎಸೆದು ಸಾಕ್ಷ್ಯ ನಾಶ ಮಾಡಲು ಮುಂದಾಗಿದ್ದರು. ಕೆಲ ದಿನಗಳ ಬಳಿಕ ಶವ ನೀರಿನಲ್ಲಿ ತೇಲಿತ್ತು. ಸತೀಶ್ ಶೆಟ್ಟಿಯವರ ಭಾವ ರಾಜುಶೆಟ್ಟಿ, ಇದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ರಿಪ್ಪನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಫಯಾಜ್ ಹಾಗೂ ಕೃಷ್ಣ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಜಿ., ಆರೋಪ ಸಾಬೀತಾದ ಕಾರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200