BREAKING NEWS – ಕರೆಂಟ್‌ ಶಾಕ್‌, ಶಿವಮೊಗ್ಗದಲ್ಲಿ ಕಂಬದ ಮೇಲೆ ಲೈನ್‌ ಮ್ಯಾನ್‌ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 SEPTEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ (Line Man) ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.

ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಲೈನ್‌ ಮ್ಯಾನ್‌ (Line Man) ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಿಪೇರಿ ಕಾರ್ಯಕ್ಕಾಗಿ ಕಿರಣ್‌ ವಿದ್ಯುತ್‌ ಕಂಬದ ಮೇಲೆ ಹತ್ತಿದ್ದರು. ಈ ವೇಳೆ ವಿದ್ಯುತ್‌ ಶಾಕ್‌ ತಗುಲಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೋರು ಶಬ್ದವಾಗಿದ್ದರಿಂದ ಸಮೀಪದ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಸ್ಥಳಕ್ಕೆ ದೌಡಾಯಿಸಿದ್ದರು. ಆಂಬುಲೆನ್ಸ್‌ಗೆ ಕರೆಯಿಸಿ ಕಿರಣ್‌ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆ ಹೊತ್ತಿಗಾಗಲೆ ಅವರು ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ 99 ಲಕ್ಷ ರೂ. ಪಂಗನಾಮ, ಮ್ಯಾಟ್ರಿಮೋನಿ ಯುವತಿಯೆ ಕಾರಣ, ಹೇಗದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment