ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ನಿರಂತರವಾಗಿ ಆಕ್ಷೇಪಿಸುತ್ತಾ ಬರಲಾಗಿದೆ. ಗಣಿ ಇಲಾಖೆ ಅಧಿಕಾರಿಗಳು ಸ್ಥಳ ಪರೀಕ್ಷೆ ನಡೆಸಿ ಗಣಿಗಾರಿಕೆ ಅನುಮತಿ ನೀಡುವ ನಿಯಮ ಪಾಲಿಸುತ್ತಿಲ್ಲ. ಲಂಚದ ಆಸೆಗೆ ಅನುಮತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ದೇವಸ್ಥಾನ ಸಮಿತಿ ಮತ್ತು ಸ್ಥಳೀಯರು ಹಲವು ಬಾರಿ ಭೂ ವಿಜ್ಞಾನ ಇಲಾಖೆಗೆ ಮನವಿ ನೀಡಿದ್ದಾರೆ. ಆದರೆ ಇಲಾಖೆ ಮನವಿಗೆ ಯಾವುದೆ ಸ್ಪಂದನೆ ನೀಡಿಲ್ಲ. 2018ರಲ್ಲಿ ಈ ಭಾಗದಲ್ಲಿ ಮರಳು ಗಣಿಗೆ ಟೆಂಡರ್ ಕರೆದಾಗ ಸಂಸದ ಬಿ.ವೈ.ರಾಘವೇಂದ್ರ, ಅಂದಿನ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಕೂಡ್ಲಿ ಗ್ರಾಮಸ್ಥರು ಹಾಗೂ ಭಕ್ತರು ಗಣಿಗಾರಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದರು. ಆಗ ಸುಮ್ಮನಾಗಿ ಈಗ ಮತ್ತೆ ಟೆಂಡರ್ ಕರೆದಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜುನಾಥ್, ಲಕ್ಷ್ಮಣ್, ರಾಮಕೃಷ್ಣ, ಕಾಂತರಾಜ್, ಹಾಲೇಶ್ ಮತ್ತಿತರರಿದ್ದರು.
ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್


LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















