ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್‌ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ನಿರಂತರವಾಗಿ ಆಕ್ಷೇಪಿಸುತ್ತಾ ಬರಲಾಗಿದೆ. ಗಣಿ ಇಲಾಖೆ ಅಧಿಕಾರಿಗಳು ಸ್ಥಳ ಪರೀಕ್ಷೆ ನಡೆಸಿ ಗಣಿಗಾರಿಕೆ ಅನುಮತಿ ನೀಡುವ ನಿಯಮ ಪಾಲಿಸುತ್ತಿಲ್ಲ. ಲಂಚದ ಆಸೆಗೆ ಅನುಮತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

stop-sand-mining-at-kudli-in-shimoga

ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ದೇವಸ್ಥಾನ ಸಮಿತಿ ಮತ್ತು ಸ್ಥಳೀಯರು ಹಲವು ಬಾರಿ ಭೂ ವಿಜ್ಞಾನ ಇಲಾಖೆಗೆ ಮನವಿ ನೀಡಿದ್ದಾರೆ. ಆದರೆ ಇಲಾಖೆ ಮನವಿಗೆ ಯಾವುದೆ ಸ್ಪಂದನೆ ನೀಡಿಲ್ಲ. 2018ರಲ್ಲಿ ಈ ಭಾಗದಲ್ಲಿ ಮರಳು ಗಣಿಗೆ ಟೆಂಡರ್ ಕರೆದಾಗ ಸಂಸದ ಬಿ.ವೈ.ರಾಘವೇಂದ್ರ, ಅಂದಿನ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌, ಕೂಡ್ಲಿ ಗ್ರಾಮಸ್ಥರು ಹಾಗೂ ಭಕ್ತರು ಗಣಿಗಾರಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದರು. ಆಗ ಸುಮ್ಮನಾಗಿ ಈಗ ಮತ್ತೆ ಟೆಂಡರ್ ಕರೆದಿದ್ದಾರೆ ಎಂದು ತಿಳಿಸಿದರು.

SLV-BOOK-SHOP-SHIMOGA

ಸುದ್ದಿಗೋಷ್ಠಿಯಲ್ಲಿ ಮಂಜುನಾಥ್, ಲಕ್ಷ್ಮಣ್, ರಾಮಕೃಷ್ಣ, ಕಾಂತರಾಜ್, ಹಾಲೇಶ್ ಮತ್ತಿತರರಿದ್ದರು.

ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment