ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021
ಕಳೆದ ನಾಲ್ಕು ದಿನ ಶಿವಮೊಗ್ಗ ನಗರದಲ್ಲಿದ್ದ ಕಠಿಣ ಲಾಕ್ಡೌನ್ ಇತ್ತು. ಇದೆ ಮಾದರಿ ಲಾಕ್ಡೌನ್ ಮುಂದುವರೆಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇವತ್ತು ವಿವಿಧ ಸಂಘಗಳು, ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ಬಳಿಕ ನಿರ್ಣಯ ಪ್ರಕಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಚರ್ಚೆ ನಡೆಸಿದ ಬಳಿಕ ಭಾನುವಾರದವರೆಗೂ ಲಾಕ್ ಡೌನ್ ಮುಂದುವರೆಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | ಮುಗೀತು ನಾಲ್ಕು ದಿನದ ‘ಕಠಿಣ ಲಾಕ್ ಡೌನ್’, ಇವತ್ತು ಶಿವಮೊಗ್ಗ ನಗರದ ವಾತಾವರಣ ಚೇಂಜ್
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಪಿಎಂಸಿಗೆ ಬೆಳಗ್ಗೆ ಏಳು ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶವಿದೆ. ಹೋಲ್ಸೇಲ್ ದಿನಸಿ ವ್ಯಾಪಾರಕ್ಕೆ ಬೆಳಗ್ಗೆ ಒಂಭತ್ತು ಗಂಟೆವರೆಗೆ ಅವಕಾಶ ನೀಡಲಾಗಿದೆ. ಸರ್ಕಾರದ ಗೈಡ್ಲೈನ್ಸ್ನಲ್ಲಿ ಅವಕಾಶವಿರುವ ಕೈಗಾರಿಕೆಗಳಿಗೆ ಮಾತ್ರ ಅವಕಾಶವಿದೆ. ಜವಳಿ ವರ್ತಕರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಮೇ 13 ರಿಂದ 16ರವರೆಗೆ ಶಿವಮೊಗ್ಗ ನಗರದಲ್ಲಿ ‘ಕಠಿಣ ಲಾಕ್ಡೌನ್’ ಘೋಷಿಸಲಾಗಿತ್ತು. ಈಗ ಅದೆ ಮಾದರಿಯ ಲಾಕ್ ಡೌನ್ ಅನ್ನು ಮೇ 23ರವರೆಗೆ ವಿಸ್ತರಿಸಲಾಗಿದೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















