SHIVAMOGGA LIVE NEWS | 19 JULY 2024
SHIMOGA : ಶಿವಮೊಗ್ಗ ಮತ್ತು ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ದಾಳಿ
ಶಿವಮೊಗ್ಗ ರಿಪೋರ್ಟ್
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಅವರ ಶಿವಮೊಗ್ಗದ ಕೃಷಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿಯಾಗಿದೆ. ಮನೆಯಲ್ಲಿರುವವರ ವಿಚಾರಣೆ ಮತ್ತು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಭದ್ರಾವತಿ ರಿಪೋರ್ಟ್
ಲೋಕಾಯುಕ್ತರ ಮತ್ತೊಂದು ತಂಡ ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಅವರ ಮನೆ ಮೇಲೆ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ರಾಜ್ಯದ ವಿವಿಧೆಡೆ ದಾಳಿ
ಲೋಕಾಯುಕ್ತ ಅಧಿಕಾರಿಗಳು ಇವತ್ತು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಯದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 12 ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200