NEWS HIGHLIGHTS
ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಪ್ರದೀಪ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಎಂ.ಹೆಚ್.ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿಯಾಗಿದೆ. ಮೂರು ಕಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ, ನಾಲ್ಕು ಡ್ರಂಕ್ ಅಂಡ್ ಡ್ರೈವ್ ಕೇಸ್ ಪತ್ತೆ

