SHIVAMOGGA LIVE NEWS | 19 JULY 2024
LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್.ಪ್ರಕಾಶ್ ಮತ್ತು ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಇವತ್ತು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ಇವತ್ತು ರಾಜ್ಯದ 12 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. 12 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ, ಭದ್ರಾವತಿಯಲ್ಲಿ ಏನೆಲ್ಲ ಸಿಕ್ತು?
ಎಸ್.ಪ್ರಕಾಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ |
⇒ ದಾಳಿಯಾದ ಸ್ಥಳ : ಕೃಷಿ ನಗರದಲ್ಲಿರುವ ಮನೆ ಸೇರಿ ಮೂರು ಕಡೆ
ಏನೆಲ್ಲ ಪತ್ತೆಯಾಯ್ತು?
ಒಟ್ಟು 2.07 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪ್ರಕಾಶ್ ಅವರ ಹೆಸರಿನಲ್ಲಿ 2 ವಾಸದ ಮನೆಗಳು, 2 ಎಕರೆ 8 ಗುಂಟೆ ಜಮೀನು ಇದ್ದು ಇದರ ಮೌಲ್ಯ 1.40 ಕೋಟಿ ರೂ.
ಮನೆಯಲ್ಲಿ 12.86 ಲಕ್ಷ ರೂ. ನಗದು, 38.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 11.30 ಲಕ್ಷ ರೂ. ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ನಾಗೇಶ್, ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ |
⇒ ದಾಳಿಯಾದ ಸ್ಥಳ : ಅಂತರಗಂಗೆಯಲ್ಲಿರುವ ಮನೆ ಸೇರಿ 5 ಕಡೆ
ಏನೆಲ್ಲ ಪತ್ತೆಯಾಯ್ತು?
ಭದ್ರಾವತಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡ ನಾಗೇಶ್ ಅವರ ಬಳಿ ಒಟ್ಟು 2.19 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗೇಶ್ ಅವರಿಗೆ 2 ನಿವೇಶನ, 2 ವಾಸದ ಮನೆ, 5 ಎಕರೆ 14 ಗುಂಟೆ ಕೃಷಿ ಜಮೀನು ಇದ್ದು ಇದರ ಒಟ್ಟು ಮೌಲ್ಯ 1.92 ಕೋಟಿ ಎಂದು ಅಂದಾಜಿಸಲಾಗಿದೆ.
ಮನೆಯಲ್ಲಿ 5.71 ಲಕ್ಷ ರೂ. ನಗದು, 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1.76 ಲಕ್ಷ ರೂ. ಮೌಲ್ಯದ ವಾಹನಗಳು, 7 ಲಕ್ಷ ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ಲೋಕಾಯುಕ್ತ ಎಸ್ಪಿ ಮಂಜುನಾಥ ಚೌದರಿ ನೇತೃತ್ವದಲ್ಲಿ ದಾಳಿ ನಡೆದಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200