ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್‌ ಭೇಟಿ, ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್) ಸಂಸ್ಥೆಯ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ (Lokayukta raid) ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ 8 ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದೆ.  

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿಮುಲ್ ಸಂಸ್ಥೆಯಲ್ಲಿ ನಡೆಯುತ್ತಿರುವ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಹಣದ ವ್ಯವಹಾರ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ದೂರಿನ ಹಿನ್ನೆಲೆ ದಾಖಲೆ ಪರಿಶೀಲಿಸಲು ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್‌ ಎಷ್ಟು?

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment