
ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪೂರೈಕೆ ಕಡಿಮೆ ಇದ್ದರೂ ಲಸಿಕೆಗೆ ಬೇಡಿಕೆ ಹೆಚ್ಚುತ್ತಲೆ ಇದೆ. ಲಸಿಕೆಗಾಗಿ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ತಿಂಗಳು ಕಳೆದರೂ ಲಸಿಕೆ ನೀಡುವ ವಿಧಾನ ಬದಲಾಗಿಲ್ಲ.
ಕುವೆಂಪು ರಸ್ತೆಯಲ್ಲಿ ಆರೋಗ್ಯ ಇಲಾಖೆಯ ತರಬೇತಿ ಕೇಂದ್ರದಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಲಸಿಕೆಗಾಗಿ ಪ್ರತಿದಿನ ಇಲ್ಲಿ ನೂರಾರು ಜನರು ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ಸೂಕ್ತ ನಿರ್ವಹಣೆ ಇಲ್ಲದೆ ಇರುವುದರಿಂದ ಇವತ್ತು ಹಲವರು ತಲೆಸುತ್ತು ಬಂದಿ ಬಿದ್ದಿದ್ದಾರೆ.
ಇಲ್ಲಿ ಮೊದಲು ಬಂದವರಿಗೆ ಅದ್ಯತೆ ನೀಡಲಾಗುತ್ತದೆ. ಆದ್ದರಿಂದ ಜನರು ಬೆಳಗ್ಗೆ ಬೇಗ ಬಂದು ಕ್ಯೂನಲ್ಲಿ ನಿಲ್ಲುತ್ತಾರೆ. ತಿಂಡಿ ತಿನ್ನದೆ ಬರುವುದರಿಂದ ಬಿಸಿಲಿನ ಝಳಕ್ಕೆ ಹೈರಾಣಾಗುತ್ತಿದ್ದಾರೆ. ಇವತ್ತು ಕ್ಯೂನಲ್ಲಿ ನಿಂತಿದ್ದ ಹಲವರು ತಲೆಸುತ್ತು ಬಂದು ಬಿದ್ದಿದ್ದಾರೆ.
ಈ ಬಗ್ಗೆ ಪತ್ರಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಗಮನ ಸೆಳೆದರು. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಅವರ ಬಳಿ ಈ ಕುರಿತು ಚರ್ಚೆ ನಡೆಸುತ್ತೇನೆ. ಶೀಘ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

ಜನರಿಗೆ ನೆರಳು ಅಥವಾ ಕೂರಲು ವ್ಯವಸ್ಥೆ ಮಾಡಬೇಕಿದೆ. ಬೆಳಗ್ಗೆ ಬೇಗ ಟೋಕನ್ ಕೊಡುವಂತಾದರೆ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಸಂಕಷ್ಟ ಅನುಭವಿಸುವುದು ತಪ್ಪಲಿದೆ. ಕಾದು ಕಾದು ಕೊನೆಗೆ ಲಸಿಕೆ ಸಿಗದೆ ಹಿಂತಿರುಗುವ ಸಮಸ್ಯೆಯು ಇಲ್ಲವಾಗಲಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






