ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎಂ.ಶ್ರೀಕಾಂತ್‌ ಕೇಕ್‌ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು.

ಇದಕ್ಕೂ ಮುನ್ನ ಬಂಜಾರ ಕನ್ವೆನ್ಷನ್‌ ಹಾಲ್‌ಗೆ ಎಂ.ಶ್ರೀಕಾಂತ್‌ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಮೆರವಣಿಗೆ ಮೂಲಕ ಅವರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ನಟ ಪುನಿತ್‌ ರಾಜ್‌ಕುಮಾರ್‌ ಅಭಿನಯದ ರಾಜಕುಮಾರ ಸಿನಿಮಾದ ಹಾಡಿನ ಮೂಲಕ ಅಭಿಮಾನಿಗಳು ಜನ್ಮದಿನದ ಶುಭಕೋರಿದರು.

ಯಾರೆಲ್ಲ ಏನೆಲ್ಲ ಹೇಳಿದರು?

M-Srikanth-Birthday-in-Shimoga-minister-madhu-bangarappa-wishes

ನಮ್ಮ ತಂದೆ ಬಂಗಾರಪ್ಪ ಅವರು ನನ್ನನ್ನು ಶಾಸಕನನ್ನಾಗಿ ಮಾಡಬೇಕು ಎಂದು ಕನಸು ಕಂಡಿದ್ದರು. ಅವರಿಲ್ಲದ ಸಂದರ್ಭ ಶ್ರೀಕಾಂತ್‌ ಅವರ ಅಧ್ಯಕ್ಷತೆಯಲ್ಲಿ ನಾನು ಶಾಸಕನಾಗಿ ವಿಧಾನಸೌಧ ಪ್ರವೇಶಿಸಿದೆ. ನಮ್ಮೊಂದಿಗೆ ಅವರು ಕೂಡ ಅಲ್ಲಿಗೆ ಬರಬೇಕಿತ್ತು. ಮುಂದೆ ಒಳ್ಳೆಯದಾಗಲಿದೆ.

– ಮಧು ಬಂಗಾರಪ್ಪ, ಸಚಿವ

ಎಂ.ಶ್ರೀಕಾಂತ್‌ ಶಿವಮೊಗ್ಗದ ಮಾಣಿಕ್ಯ. ಎಲ್ಲ ಸಮುದಾಯದವರನ್ನು ಒಟ್ಟಿಗೆ ಕೊಂಡೊಯ್ಯುವ ಶಕ್ತಿ ಅವರಿಗಿದೆ. ಲೈಂಗಿಕ ಅಲ್ಪಸಂಖ್ಯಾತರು, ದೇವದಾಸಿಯರ ಮಕ್ಕಳಿಗಾಗಿಯೆ ಒಂದಷ್ಟು ವಿಶೇಷವಾದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ವಯಸ್ಸಾಗಬಾರದು. ನಮ್ಮ ಆಯಸ್ಸಿನಲ್ಲಿಯು ಅವರಿಗೆ ಪಾಲು ಕೊಡಲು ಸಿದ್ದ.

– ಅಕೈ ಪದ್ಮಶಾಲಿ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ

M-Srikanth-Birthday-in-Shimoga-minister-madhu-bangarappa-wishes

ರಾಜಕಾರಣ ಎಂದರೆ ಜಾತಿ, ಸ್ವಜನಪಕ್ಷಪಾತ ಎಂಬಂತಾಗಿದೆ. ಆದರೆ ಶ್ರೀಕಾಂತ್‌ ಭಿನ್ನ ದಾರಿಯಲ್ಲಿದ್ದಾರೆ. ಅವರು ಅಧಿಕಾರದಿಂದ ರಾಜಕಾರಣ ಮಾಡಿದವರಲ್ಲ. ಜನರ ಪ್ರೀತಿಯಿಂದ ರಾಜಕೀಯ ಮಾಡುತ್ತಿದ್ದಾರೆ. ಇವರದ್ದು ಮನುಷ್ಯತ್ವದ ರಾಜಕಾರಣವಾಗಿದೆ.

– ಸಿರಾಜ್‌ ಅಹಮದ್‌, ಸಹ್ಯಾದ್ರಿ ಕಾಲೇಜು ಉಪನ್ಯಾಸಕ

Web-Design

ಸಾಲು ಸಾಲು ಸನ್ಮಾನ, ಶುಭಾಶಯ

ಇದೇ ವೇಳೆ ರಾಜಕಾರಣಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವೈಯಕ್ತಿಕವಾಗಿ ಎಂ.ಶ್ರೀಕಾಂತ್‌ ಅವರಿಗೆ ಶಾಲು ಹೊದಿಸಿ, ಪೇಟೆ ತೊಡಿಸಿ ಸನ್ಮಾನಿಸಿದರು (Birthday).

M-Srikanth-Birthday-in-Shimoga-minister-madhu-bangarappa-wishes

ಶಾಸಕಿ ಶಾರದಾ ಪೂರ್ಯಾನಾಯ್ಕ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್‌, ಪ್ರಮುಖರಾದ ಮದನ್‌, ವಕೀಲ ಕೆ.ಪಿ.ಶ್ರೀಪಾಲ್‌, ಮಾಜಿ ಮೇಯರ್‌ ನಾಗರಾಜ್‌ ಕಂಕಾರಿ, ಮಾಜಿ ಉಪ ಮೇಯರ್‌ ಪಾಲಾಕ್ಷಿ, ರಂಗನಾಥ್‌, ವಿನಯ್‌ ತಾಂದ್ಲೆ, ಶರತ್‌ ಮರಿಯಪ್ಪ ಸೇರಿದಂತೆ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 23, 2025

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Leave a Comment