ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 ಮಾರ್ಚ್ 2022
ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಡಬಲ್ ಇಂಜಿನ್ ಸರ್ಕಾರಗಳು ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಸೊರಬ ತಾಲೂಕಿನಲ್ಲಿ 11 ಸಾವಿರ ರೈತರಿಗೆ ಸಮಸ್ಯೆಯಾಗಿದೆ. ರೈತರು ಬೇಲ್ ತೆಗೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರ ಸೃಷ್ಟಿ ಮಾಡಿದೆ. ಹೊಟ್ಟೆ ಪಾಡಿಗೆ ಸಾಗುವಳಿ ಮಾಡುತ್ತಿರುವ ಭೂ ಒತ್ತುವರಿದಾರರನ್ನು ಭೂ ಕಬಳಿಕೆದಾರರು ಎಂದು ಕೇಸು ಹಾಕಿಸಿ ಬೆಂಗಳೂರಿಗೆ ಮತ್ತು ಹೈಕೋರ್ಟ್ಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರು ತಂದ ಕಾನೂನು
ಈ ಕಾನೂನು ತಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಈಗ ಸದನದಲ್ಲಿ ರೈತರಿಗೆ ಅನ್ಯಾಯ ಎಂದು ಹೇಳುತ್ತಿದ್ದಾರೆ. ಈ ಕಾನೂನು ತಿದ್ದುಪಡಿ ಮಾಡದಿದ್ದರೆ ಸರಕಾರಕ್ಕೆ ಒಳ್ಳೆ ಹೆಸರು ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರೇ ಮಾಡಿದ ಕಾನೂನಿನ ವಿರುದ್ಧ ಈಗ ಮಾತನಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ | ‘ಉಕ್ರೇನ್’ನಿಂದ ಮರಳಿದವರ ವಿದ್ಯಭ್ಯಾಸಕ್ಕೆ ಶಿವಮೊಗ್ಗದ ಶರಾವತಿ ಡೆಂಟಲ್ ಕಾಲೇಜಿನಲ್ಲಿ ಅನುಕೂಲ’
ಅರಣ್ಯ ಹಕ್ಕು ಕಾಯ್ದೆ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾಹಿತಿಯ ಕೊರತೆಯಿಂದ ಮಾತನಾಡುತ್ತಿದ್ದಾರೆ. ಅವರು ಇತಿಹಾಸ ಅರಿತು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ಕುರಿತು ಮಾತನಾಡಬೇಕು ಎಂದು ಹೇಳಿದರು.
ಸಂಸದರಿಗೆ ಇತಿಹಾಸ ಗೊತ್ತಿಲ್ಲ
2006ರಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯಿದೆಯಲ್ಲಿ ಲೋಪಗಳಿವೆ ಮತ್ತು ಅಂದು ಸಂಸದರಾಗಿದ್ದವರು ಮಾತನಾಡಿಲ್ಲ ಎಂದು ಆರೋಪ ಮಾಡಿರುವ ಈಗಿನ ಸಂಸದರಿಗೆ ಇತಿಹಾಸವೇ ಗೊತ್ತಿಲ್ಲ. 2002 ರಲ್ಲಿ ಅಂದಿನ ಸಂಸದರಾಗಿದ್ದ ಎಸ್.ಬಂಗಾಪ್ಪ ಅವರು 45 ನಿಮಿಷ ಸಂಸತ್ತಿನಲ್ಲಿ ಮಾತನಾಡಿ ಅನಧಿಕೃತ ಸಾಗುವಳಿದಾರರ ಬಗ್ಗೆ ಮಾತನಾಡಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಜಾರಿಗೆ ತಂದಿದ್ದೇ ಕಾಂಗ್ರೆಸ್ ಸರಕಾರ ಇದರಿಂದ ಪರಿಶಿಷ್ಟ ಪಂಗಡ ಹಾಗೂ ಗುಡ್ಡಗಾಡು ಪ್ರದೇಶದ ಜನರಿಗೆ ಉಳುವ ಭೂಮಿಗೆ ಹಕ್ಕುಪತ್ರ ಸಿಕ್ಕಿದೆ ಎಂದು ಹೇಳಿದರು.
ಇದನ್ನೂ ಓದಿ | ಮಾಜಿ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ ಆನವಟ್ಟಿಯಲ್ಲಿ ಪ್ರತಿಭಟನೆಗೆ ನಿರ್ಧಾರ
ಕಾಯಿದೆಯಲ್ಲಿ 75 ವರ್ಷ ದಾಖಲೆ ಬೇಕೆಂಬ ಷರತ್ತು ಇರುವುದು ಮಲೆನಾಡಿನ ಭಾಗದ ಜನರಿಗೆ ತೊಂದರೆಯಾಗಿರುವುದು ನಿಜ. ಆದರೆ ಅದನ್ನು ಸರಿಮಾಡುತ್ತೇವೆ ಎಂದು ಚುನಾಯಿತರಾದ ಬಿಜೆಪಿ ಸರಕಾರ ಯಾಕೆ ಮಾಡಿಲ್ಲ ಮತ್ತು ನಮ್ಮ ಸಂಸದರು ಈ ಬಗ್ಗೆ ಯಾಕೆ ಸಂಸತ್ತಿನಲ್ಲಿ ಮಾತನಾಡಿಲ್ಲ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ಭೂ ಸುಧಾರಣಾ ಕಾಯಿದೆ ಮೂಲಕ ಬಡವರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷ, ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪಾರಂ 50, 53 ಜಾರಿಗೆ ತಂದು ಲಕ್ಷಾಂತರ ಭೂ ಹೀನ ರೈತರಿಗೆ ಭೂಮಿ ಕೊಡಲಾಗಿದೆ. ಆದರೆ ಇತಿಹಾಸ ಮರೆಮಾಚುವ ಬಿಜೆಪಿ ನಾಯಕರು ಈಗ ಪ್ರತಿಪಕ್ಷಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದು ಮಧುಬಂಗಾರಪ್ಪ ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಮುಖರಾದ ಜಿ.ಡಿ.ಮಂಜುನಾಥ್, ಡಾ.ಶ್ರೀನಿವಾಸ್ ಕರಿಯಣ್ಣ, ಕಲಗೋಡು ರತ್ನಾಕರ್, ಯು.ಶಿವಾನಂದ್, ಆರ್.ಸಿ.ಪಾಟೀಲ್, ಹುಲ್ತಿಕೊಪ್ಪ ಶ್ರೀಧರ್, ಪ್ರವೀಣ್, ವೈ.ಹೆಚ್.ನಾಗರಾಜ್ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















