SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವೇಳೆ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ (Police) ಕೈಗೊಳ್ಳಲಾಗಿದೆ. ಕಿಡಿಗೇಡಿ ಕೃತ್ಯ ತಡೆಗೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸದ್ಯ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಸಾಗುತ್ತಿದೆ. ಇನ್ನು, ಮೆರವಣಿಗೆಯಲ್ಲಿ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಜನರನ್ನು ಮುಂದಕ್ಕೆ ಕಳುಹಿಸಲು ಅನುಕೂಲ ಆಗುವಂತೆ ಪಿ ಬೋರ್ಡ್ಗಳನ್ನು ಹಿಡಿದು ಒಂದೊಂದು ತಂಡ ನಿಯೋಜನೆ ಮಡಲಾಗಿದೆ. ಈ ತಂಡ ಒಂದು ಗುಂಪಿನ ಜನರನ್ನು ಮೆರವಣಿಗೆಯಲ್ಲಿ ಮುಂದೆ ಸಾಗಿಸುತ್ತ ಹೋಗುತ್ತದೆ.
ಮತ್ತೊಂದೆಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮತ್ತು ಕಿಡಿಗೇಡಿ ಕೃತ್ಯ ತಡೆಗೆ ಈ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಯುವಕರು, ಯುವತಿಯರ ಜೊತೆಗೆ ಡಾನ್ಸ್ ಮಾಡುತ್ತಲೆ ಈ ತಂಡ ಮುಂದಿ ಸಾಗುತ್ತಿದೆ.
ಇದನ್ನೂ ಓದಿ » ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್, ಹೇಗಿದೆ ವೈಭವ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200