SHIVAMOGGA LIVE NEWS | 10 APRIL 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಆನ್ಲೈನ್ ರಿವ್ಯು ನೀಡಿ ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 4.17 ಲಕ್ಷ ರೂ. ವಂಚಿಸಲಾಗಿದೆ. ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಮಾಹಿತಿ ನೀಡಿ, ಹಣ ವರ್ಗಾಯಿಸಿಕೊಳ್ಳಲಾಗಿದೆ.
ಆಗಿದ್ದೇನು?
ಶಿವಮೊಗ್ಗದ ವ್ಯಕ್ತಿಗೆ (ಹೆಸರು ಗೌಪ್ಯ) ವಾಟ್ಸಪ್ನಲ್ಲಿ ಹೆಚ್ಸಿಎಲ್ ಟೆಕ್ನಾಲಜಿಗೆ ರಿವ್ಯು ನೀಡಿದರೆ 150 ರೂ. ಹಣ ಸಿಗಲಿದೆ ಎಂದು ಮೆಸೇಜ್ ಬಂದಿತ್ತು. ಬಳಿಕ ಲಾಭಾಂಶದ ಆಸೆ ಹುಟ್ಟಿಸಿ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ಮೊದಲು 2 ಸಾವಿರ ರೂ. ಹಣ ವರ್ಗಾಯಿಸಿದ್ದರು. ಅವರಿಗೆ 2800 ರೂ. ಹಣ ಮರಳಿತ್ತು. ಬಳಿಕ ಟೆಲಿಗ್ರಾಂ ಗ್ರೂಪ್ ಒಂದಕ್ಕೆ ಶಿವಮೊಗ್ಗದ ವ್ಯಕ್ತಿಯನ್ನು ಸೇರಿಸಿಕೊಳ್ಳಲಾಗಿತ್ತು. ಹೆಚ್ಚಿನ ಲಾಭಾಂಶದ ಆಸೆ ಮೂಡಿಸಿ, ಹಂತ ಹಂತವಾಗಿ 4.17 ಲಕ್ಷ ರೂ. ಹೂಡಿಕೆ ಮಾಡಿಕೊಂಡಿದ್ದರು. ಆದರೆ ಯಾವುದೆ ಹಣ ಮರಳಿರಲಿಲ್ಲ.
ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಮನೆ ತಲುಪುವ ಹೊತ್ತಿಗೆ ಎದುರಿಗೆ ಬಂತು ಬೈಕ್, LBS ನಗರದಲ್ಲಿ ಕೇಸ್, ಮಹಿಳೆಯರೆ ಹುಷಾರ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






