ಜಮೀನಿನಲ್ಲಿ ಸಿಕ್ತು ರಾಶಿಗಟ್ಟಲೆ ಚಿನ್ನದ ಸರಗಳು, ಮೂಟೆಯಲ್ಲಿ ತಂದು ಮಾರಾಟ, ಆಮೇಲೆ ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 14 FEBRUARY 2024

SHIMOGA : ಜಮೀನು ಕೆಲಸ ಮಾಡುವಾಗ ರಾಶಿಗಟ್ಟಲೆ ಚಿನ್ನದ ಸರಗಳು ಪತ್ತೆಯಾಗಿವೆ. ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ, ಎನ್‌.ಆರ್‌.ಪುರದ ವ್ಯಕ್ತಿಯೊಬ್ಬರಿಗೆ ನಕಲಿ ಸರಗಳನ್ನು ನೀಡಿ 15 ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಹಣ ಪಡೆದು ಮೋಸ ಮಾಡಲಾಗಿದೆ.

‘ಒರಿಸ್ಸಾದಿಂದ ರಸ್ತೆ ಕೆಲಸಕ್ಕೆ ಬಂದಿದ್ದೆ’

ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) ಎನ್‌.ಆರ್‌.ಪುರದಲ್ಲಿ ಒರಿಸ್ಸಾ ಮೂಲದವ ಎಂದು ಹೇಳಿಕೊಂಡು ಕಿರಣ್‌ ಎಂಬಾತನ ಪರಿಚಯವಾಗಿತ್ತು. ಜಮೀನು ಒಂದರಲ್ಲಿ ಕೆಲಸ ಮಾಡುವಾಗ ಬಂಗಾರದ ಸರಗಳು ಸಿಕ್ಕಿವೆ ಎಂದು ಕಿರಣ್‌ ನಂಬಿಸಿದ್ದ. ಸಾಕ್ಷಿಯಾಗಿ ಒಂದು ಚಿನ್ನದ ಸರವನ್ನು ತೋರಿಸಿ, ಅದರ ಸ್ವಲ್ಪ ಭಾಗವನ್ನು ತುಂಡು ಮಾಡಿ ಎನ್‌.ಆರ್‌.ಪುರದ ವ್ಯಕ್ತಿಗೆ ನೀಡಿದ್ದ. ಪರೀಕ್ಷಿಸಿದಾಗ ಅದು ಅಸಲಿ ಚಿನ್ನ ಎಂದು ತಿಳಿದು ಬಂದಿತ್ತು.

30 ಲಕ್ಷಕ್ಕೆ ಬೇಡಿಕೆ, 15 ಲಕ್ಷಕ್ಕೆ ವ್ಯವಹಾರ

ಎನ್‌.ಆರ್‌.ಪುರದ ವ್ಯಕ್ತಿಗೆ ಕರೆ ಮಾಡಿದ ಕಿರಣ್‌, ಅಷ್ಟೂ ಚಿನ್ನದ ಸರಗಳನ್ನು ಮಾರಾಟ ಮಾಡಬೇಕಿದೆ. ತಾನೀಗ ಶಿವಮೊಗ್ಗದಲ್ಲಿರುವುದಾಗಿ ತಿಳಿಸಿದ್ದ. ಮೊದಲಿಗೆ 30 ಲಕ್ಷ ರೂ. ಕೇಳಿದ್ದ ವಂಚಕ ಕಿರಣ್‌, ಕೊನೆಗೆ 15 ಲಕ್ಷ ರೂ.ಗೆ ವ್ಯವಹಾರ ಮಾಡಲು ಒಪ್ಪಿಕೊಂಡಿದ್ದ. ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಸಮೀಪ ಕಾರಿನಲ್ಲಿ ಕುಳಿತು ಎನ್‌.ಆರ್‌.ಪುರದ ವ್ಯಕ್ತಿಗೆ ಚಿನ್ನದ ಸರಗಳಿದ್ದ ಚೀಲ ನೀಡಿದ್ದ. ಅವರಿಂದ 15 ಲಕ್ಷ ರೂ. ಹಣವನ್ನು ಪಡೆದುಕೊಂಡಿದ್ದ.

ಎನ್‌.ಆರ್‌.ಪುರದ ವ್ಯಕ್ತಿ ಸಮೀಪದ ಚಿನ್ನದ ಅಂಗಡಿಯಲ್ಲಿ ಪರೀಕ್ಷಿಸಿದಾಗ ಅವು ನಕಲಿ ಚಿನ್ನ ಅನ್ನುವುದು ಗೊತ್ತಾಗಿದೆ. ಈ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಜಿಂಕೆ ಮಾಂಸ ಬೇಯಿಸುವ ಹೊತ್ತಿಗೆ ದಾಳಿ, ಪಾತ್ರೆ ಸಹಿತ ಆರೋಪಿಗಳು ಅರೆಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 14, 2024

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment