SHIVAMOGGA LIVE NEWS | 3 JUNE 2024
SHIMOGA : ವಿದ್ಯಾನಗರದ ಮಹಾದೇವಿ ಟಾಕೀಸ್ ನಿಲ್ದಾಣದಲ್ಲಿ ರೈಲಿಗೆ (TRAIN) ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಗುರುಪುರದ ನಿವಾಸಿ ಎಸ್.ರುದ್ರಪ್ಪ (68) ಮೃತರು. ಮಹಾದೇವಿ ಟಾಕೀಸ್ ಹಿಂಭಾಗದ ರೈಲ್ವೆ ಹಳಿ ಅಕ್ಕಪಕ್ಕದಲ್ಲಿದ್ದ ಸೌದೆ ತರಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಮೇಲ್ಸೇತುವೆ ಸಮೀಪ ರೈಲ್ವೆ ಹಳಿ ಬಳಿ ತೆರಳುತ್ತಿದ್ದಾಗ ಮೈಸೂರು-ತಾಳಗುಪ್ಪ ರೈಲು ಡಿಕ್ಕಿ ಹೊಡೆದಿದೆ. ರುದ್ರಪ್ಪ ಅವರು ಕಿವುಡು ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200