ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 4 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಬೆಳೆ ವಿಮೆ (Insurance) ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದನ್ನು ಪರಿಷ್ಕರಣೆ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಡಾ. ಆರ್‌.ಎಂ.ಮಂಜುನಾಥ ಗೌಡ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿವಮೊಗ್ಗ ಜಿಲ್ಲೆಯಲ್ಲಿ 50,383 ರೈತರು 22.60 ಕೋಟಿ ರೂ. ಪ್ರೀಮಿಯಂ ಪಾವತಿಸಿದ್ದರು. ಈ ಪೈಕಿ 23,094 ರೈತರು ಡಿಸಿಸಿ ಬ್ಯಾಂಕ್‌ ಮೂಲಕವೇ 10.13 ಕೋಟಿ ರೂ. ಜಮಾ ಮಾಡಿದ್ದರು. ಈಗ ಒಟ್ಟು 19,358 ರೈತರಿಗೆ 45 ಕೋಟಿ ರೂ. ಬೆಳೆ ವಿಮೆ ಪಾವತಿಸಲಾಗಿದೆ. ಈ ಪೈಕಿ ಡಿಸಿಸಿ ಬ್ಯಾಂಕ್‌ ಮೂಲಕ ಪ್ರೀಮಿಯಮ್‌ ಪಾವತಿಸಿದ್ದ 8873 ರೈತರಿಗೆ 19.17 ಕೋಟಿ ರೂ. ವಿಮೆ ಪರಿಹಾರ ದೊರೆತಿದೆ ಎಂದರು.

041224 Dr RM Manjunatha Gowda press meet in DCC Bank

ಹೆಚ್ಚು ವಿಮೆ ಪರಿಹಾರ ದೊರೆಯಬೇಕು

ಬೆಳೆ ವಿಮೆ ಹೆಸರಿನಲ್ಲಿ ರೈತರ ಮೂಗಿಗೆ ತುಪ್ಪ ಹಚ್ಚುವಂತಾಗಬಾರದು. ಭಾರಿ ಮಳೆಯಾಗಿ ಶೇ.50 ಅಡಿಕೆ ಬೆಳೆ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ವಿಮೆ ಕಂಪನಿಗೆ ಸರಿಯಾಗಿ ಮಾಹಿತಿ ನೀಡಿ ಹೆಚ್ಚು ವಿಮೆ ಪರಿಹಾರ ಕೊಡಿಸಬೇಕು.

– ಡಾ. ಆರ್‌.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

RED-LINE-

ವಿಮೆ ಕಂಪನಿಯವರು ನಮ್ಮ ಜಿಲ್ಲೆಯಲ್ಲಿ ಶಾಖೆಯನ್ನೇ ತೆರೆಯುವುದಿಲ್ಲ. ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಮೂಲಕ ರೈತರಿಂದ ಪ್ರೀಮಿಯಂ ಪಾವತಿಸಿಕೊಳ್ಳುತ್ತಾರೆ. ಆ ಬಳಿಕ ವಿಮೆ ಕಂಪನಿಯವರು ಮಾಯವಾಗುತ್ತಾರೆ. ಮುಂದೆ ರೈತರು ಯಾರನ್ನು ವಿಚಾರಿಸಬೇಕು ಅನ್ನುವುದೇ ಗೊತ್ತಾಗುವುದಿಲ್ಲ. ಅಧಿಕಾರಿಗಳಿಗು ಇದರ ಬಗ್ಗೆ ಮಾಹಿತಿ ಇರುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಸ್‌.ಕೆ.ಮರಿಯಪ್ಪ, ನಿರ್ದೇಶಕರಾದ ಮಹಾಲಿಂಗಶಾಸ್ತ್ರಿ, ಸುಧೀರ್‌, ದುಗ್ಗಪ್ಪಗೌಡ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment