SHIVAMOGGA LIVE NEWS | 8 SEPTEMBER 2023
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ (DCC Bank) ನಿರ್ದೇಶಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ಆಡಳಿತ ಮಂಡಳಿ ಕೋ ಅಪ್ ಮಾಡಿ ನೇಮಕ ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಅವರನ್ನು ನೇಮಿಸಲಾಗಿದೆ.
ಡಿಸಿಸಿ ಬ್ಯಾಂಕ್ (DCC Bank) ಸಭಾಂಗಣದಲ್ಲಿ ಶುಕ್ರವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ದೇಶಕರಾದ ಆರ್.ಎಂ.ಮಂಜುನಾಥ ಗೌಡ ಅವರನ್ನು ಸ್ವಾಗತಿಸಲಾಯಿತು.
ನಿರ್ದೇಶಕರಾಗಿದ್ದ ದುಗ್ಗಪ್ಪಗೌಡ ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದರು. ಆ ಸ್ಥಾನಕ್ಕೆ ಮಂಜುನಾಥಗೌಡ ಅವರನ್ನು ಕೋ ಅಪ್ ಮೂಲಕ ನಿರ್ದೇಶಕರಾಗಿ ನೇಮಿಸಲಾಗಿದೆ.
ತೆರವಾದ ಸ್ಥಾನಕ್ಕೆ ಚುನಾವಣೆ ಯಾಕಿಲ್ಲ?
ನಿರ್ದೇಶಕರೊಬ್ಬರು ಎರಡೂವರೆ ವರ್ಷ ಅಧಿಕಾರ ಪೂರೈಸಿ ರಾಜೀನಾಮೆ ನೀಡಿದರೆ ಮರು ಚುನಾವಣೆ ನಡೆಸಬಹುದು. ಅಥವಾ ಕೋ ಅಪ್ ಮೂಲಕ ಆಡಳಿತ ಮಂಡಳಿಯೇ ಮತ್ತೊಬ್ಬ ನಿರ್ದೇಶಕರನ್ನು ನೇಮಕ ಮಾಡಿಕೊಳ್ಳಬಹುದು. ಇದೇ ಕಾರಣಕ್ಕೆ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿದ್ದ ದುಗ್ಗಪ್ಪಗೌಡ ರಾಜೀನಾಮೆ ನೀಡಿದರು ಮರು ಚುನಾವಣೆಯಾಗದೆ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ
ಇತ್ತ ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ಅಪೆಕ್ಸ್ ಬ್ಯಾಂಕ್ನ (Apex Bank) ಪ್ರತಿನಿಧಿಯಾಗಿ ದುಗ್ಗಪ್ಪ ಗೌಡ ಅವರನ್ನು ನೇಮಿಸಲಾಗಿದೆ. ಈ ಮೂಲಕ ಅವರು ಡಿಸಿಸಿ ಬ್ಯಾಂಕ್ನ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಭ್ಯರ್ಥಿ ನೇಮಕಾತಿ ಅವ್ಯವಹಾರ ತನಿಖೆಗೆ ಟೀಮ್ ರಚನೆ
ಮರು ಚುನಾವಣೆಗೆ ಅಧಿಸೂಚನೆ
ಮಂಜುನಾಥ ಗೌಡ ಅವರ ಮೂಲ ಸ್ಥಾನ ತೆರವಾಗಿದ್ದು, ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ಶಿವಮೊಗ್ಗ ಉಪ ವಿಭಾಗದ ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಮತ್ತು ಇತರೆ ಮಾರಾಟ, ಸಂಸ್ಕರಣ ಸಹಕಾರ ಸಂಘಗಳ ಕ್ಷೇತ್ರದಿಂದ ಮಂಜುನಾಥ ಗೌಡ ಆಯ್ಕೆಯಾಗಿದ್ದರು. ಅವರು ನಿರ್ದೇಶಕ ಸ್ಥಾನ ಕಳೆದುಕೊಂಡ ಹಿನ್ನೆಲೆ ಅ.11ರಂದು ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಚುನಾವಣೆ ಪ್ರಕ್ರಿಯೆ ಇನ್ನಷ್ಟೆ ಆರಂಭವಾಗಬೇಕಿದೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಪದಚ್ಯುತಿ, ಯಾರೆಲ್ಲ ಯಾರ ಪರ ಮತ ಚಲಾಯಿಸಿದರು? ಇಲ್ಲಿದೆ ಕಂಪ್ಲೀಟ್ ಮಾಹಿತಿ
ಮತ್ತೆ ಅಧ್ಯಕ್ಷರಾಗ್ತಾರಾ ಮಂಜುನಾಥ ಗೌಡ?
ಅವಿಶ್ವಾಸ ನಿರ್ಣಯ ಮಂಡಿಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಅವರು ಹಂಗಾಮಿ ಅಧ್ಯಕ್ಷರಾಗಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆ ಇನ್ನಷ್ಟೆ ನಡೆಯಬೇಕಿದೆ. ಈಗ ಮಂಜುನಾಥ ಗೌಡ ನಿರ್ದೇಶಕರಾಗಿದ್ದು ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಬಹುತೇಕ ಖಚಿತ. ಪುನಃ ಡಿಸಿಸಿ ಬ್ಯಾಂಕ್ಗೆ ಮಂಜುನಾಥ ಗೌಡ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಅವರ ನೇಮಕ ತೀವ್ರ ಕುತೂಹಲ ಮೂಡಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200