Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

25/05/2023 10:09 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 25 MAY 2023

SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK)‌ ನಿರ್ದೇಶಕ ಸ್ಥಾನದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಜಾಗೊಳಿಸಿದ್ದ ಸಹಕಾರ ಇಲಾಖೆ ಜಂಟಿ ನಿಬಂಧಕರ ಆದೇಶವನ್ನು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನ ಪುನಃ ದಕ್ಕಿದಂತಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

RM Manjunatha Gowda at Shimoga DCC Bank

ನಿರ್ದೇಶಕರ ಸ್ಥಾನ ವಜಾ ಆಗಿದ್ದೇಕೆ?

DCC BANKನ ಮುಖ್ಯ ಶಾಖೆಯಲ್ಲಿ ನಕಲಿ ಬಂಗಾರ ಅಡವಿಟ್ಟು ಬಹುಕೋಟಿ ರೂ. ವಂಚಿಸಲಾಗಿತ್ತು. ಈ ಪ್ರಕರಣದಲ್ಲಿ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ಜಂಟಿ ಸಹಕಾರ ನಿಬಂಧಕರ ನ್ಯಾಯಾಲಯವು ಬ್ಯಾಂಕ್‌ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿತ್ತು. ಹೈಕೋರ್ಟ್‌ ಸೂಚನೆಯಂತೆ ಮಂಜುನಾಥ ಗೌಡ ಅವರು ಅಪರ ಸಹಕಾರ ನಿಬಂಧಕರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

ಡಿಸಿಸಿ ಬ್ಯಾಂಕಿಗೆ ಆರ್‌ಎಂಎಂ

ಇತ್ತ ನ್ಯಾಯಾಲಯದ ಆದೇಶ ಪ್ರತಿ ಸಿಗುತ್ತಿದ್ದಂತೆ ಆರ್.ಎಂ.ಮಂಜುನಾಥ ಗೌಡ ಅವರು DCC BANK ಮುಖ್ಯ ಕಚೇರಿಗೆ ಆಗಮಿಸಿದ್ದರು. ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಆದೇಶ ಪ್ರತಿ ನೀಡಿದರು. ಈ ವೇಳೆ ನಿರ್ದೇಶಕರಾದ ಜಿ.ಎನ್.ಸುಧೀರ್‌, ಷಡಾಕ್ಷರಿ, ದುಗ್ಗಪ್ಪ ಗೌಡ, ಪರಮೇಶ್ವರ್‌, ಕೆಎಂಎಫ್‌ ಮಾಜಿ ಅಧ್ಯಕ್ಷ ಜಗದೀಶ್‌, ಜಿಲ್ಲಾ ಕಾಂಗ್ರೆಸ್‌ ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಇದ್ದರು.

ಮಂಜುನಾಥ ಗೌಡ ಹೇಳಿದ್ದೇನು?

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ಆರ್.‌ಎಂ.ಮಂಜುನಾಥ ಗೌಡ, RM Manjunatha Gowda, DCC Bank Shimogaʼರಾಜಕೀಯ ಪಿತೂರಿ ಮಾಡಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದರು. ಒಮ್ಮೆ 8 ಸದಸ್ಯರನ್ನು ವಜಾಗೊಳಿಸಿದ್ದರು. ಆಮೇಲೆ ನನ್ನೊಬ್ಬನನ್ನೆ ಅನರ್ಹ ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದೆ. ವಿಚಾರಣೆ ನಡೆಸಿ ಸಹಕಾರ ನಿಬಂಧಕರ ಕಚೇರಿಗೆ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಅಪರ ನಿಬಂಧಕರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ ಎಂದರು.

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ಡಿಸಿಸಿ ಬ್ಯಾಂಕ್‌ಗೆ ರೀ ಎಂಟ್ರಿ

ಆರ್‌.ಎಂ.ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ಗೆ ದೀರ್ಘಾವಧಿ ಅಧ್ಯಕ್ಷರಾಗಿದ್ದರು. 1997ರಲ್ಲಿ ಮೊದಲ ಬಾರಿ ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದರು. ಆಮೇಲೆ 1999 ರಿಂದ 2010ರವರೆಗೆ, 2011 ರಿಂದ 2014ರವರೆಗೆ, 2015ರಲ್ಲಿ ಪುನಃ ಅಧ್ಯಕ್ಷರಾಗಿದ್ದರು. 2020ರ ಜು14ರಂದು ನಿರ್ದೇಶಕ ಸ್ಥಾನ ಅನರ್ಹಗೊಳಿಸಿದ್ದರಿಂದ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. ಈ ಹಿನ್ನೆಲೆ ಎಂ.ಬಿ.ಚನ್ನವೀರಪ್ಪ ಅವರು ಅಧ್ಯಕ್ಷರಾಗಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article whatsapp-general-image ವಾಟ್ಸಪ್‌ನಲ್ಲಿ ಶಿವಮೊಗ್ಗದ ಮಹಿಳೆಯ ಅಶ್ಲೀಲ ಚಿತ್ರ ಹಾಕಿದ ವ್ಯಕ್ತಿ, ಆರೋಪ ಸಾಬೀತಾದರೆ ವರ್ಷಗಟ್ಟಲೆ ಜೈಲು, ಲಕ್ಷಗಟ್ಟಲೆ ಫೈನ್‌
Next Article Police-Jeep-With-Light-New. BREAKING NEWS | ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದ ಸ್ಪಾ ಮೇಲೆ ಪೊಲೀಸ್‌ ದಾಳಿ, ದಂಪತಿ ಅರೆಸ್ಟ್‌

ಇದನ್ನೂ ಓದಿ

government-employees-state-level-sports-at-nehru-stadium
SHIVAMOGGA CITY

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
stop-sand-mining-at-kudli-in-shimoga
SHIVAMOGGA CITY

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
HIVAMOGGA-NEWS- map
SHIVAMOGGA CITY

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
SHIMOGA-NEWS-UPDATE
SHIVAMOGGA CITY

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?