SHIVAMOGGA LIVE NEWS | 25 JANUARY 2024
SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ.
ಮಂಜುನಾಥ ಗೌಡ ಹೇಳಿದ್ದೇನು?
‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರ ನಿರ್ಧಾರಕ್ಕೆ ಬಿಟ್ಟದ್ದುʼ ಎಂದು ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೇಮಕ ಕುರಿತು ಹಬ್ಬಿತ್ತು ಸುದ್ದಿ
ಈಚೆಗೆ ನಿಗಮ ಮಂಡಳಿಗೆ ಹಲವರ ನೇಮಕ ಮಾಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆರ್.ಎಂ.ಮಂಜುನಾಥಗೌಡ ಅವರಿಗೆ ಪ್ರಮುಖ ಸಂಸ್ಥೆಯೊಂದಕ್ಕೆ ನೇಮಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಹುಟ್ಟಿಸಿತ್ತು. ಫೇಸ್ಬುಕ್, ವಾಟ್ಸಪ್ ಮೂಲಕ ಮಂಜುನಾಥಗೌಡ ಅವರಿಗೆ ಹಲವರು ಅಭಿನಂದನೆಯನ್ನು ಸಲ್ಲಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ, ಎರಡು ದಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200