ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 MAY 2024
SHIMOGA : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಶಾಖೆ ವತಿಯಿಂದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ (Hostel) ಉದ್ಘಾಟನೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಮೇ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ರಮೇಶ್ ಬಾಬು ಜಾಧವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗೋಸಾಯಿ ಮರಾಠ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿ ವಿದ್ಯಾರ್ಥಿ ನಿಲಯ ಉದ್ಘಾಟಿಸಲಿದ್ದಾರೆ. ಕ್ಷತ್ರಿಯ ಪರಿಷತ್ ಗವರ್ನಿಂಗ್ ಕೌನ್ಸಿಲ್ ಚೇರ್ಮನ್ ಎಸ್.ಆರ್.ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಟಿ.ಆರ್. ಸುನೀಲ್ ಚವ್ಹಾಣ್, ಖಜಾಂಚಿ ವೆಂಕಟರಾವ್ ಚವ್ಹಾಣ್, ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಅಭಿವೃದ್ಧಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶ್ ಆರ್. ಪಾಗೋಜಿ ಭಾಗವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಇಂದಿರಾಬಾಯಿ ಲಕ್ಷ್ಮೀಕಾಂತ್ ಪವಾರ್ ಹಾಗೂ ಮಿಥುನ್ ಜಿ. ಜಗದಾಳೆ ಅವರನ್ನು ಸನ್ಮಾನಿಸಲಾಗುವುದು. ಛತ್ರಾಪತಿ ಶಿವಾಜಿ ಮರಾಠ ಟ್ರಸ್ಟ್ ಅಧ್ಯಕ್ಷ ಎಚ್.ಸಿದ್ಧೋಜಿರಾವ್ ಜಾಧವ್, ಶಿವಮೊಗ್ಗದ ಕ್ಷತ್ರಿಯ ಮರಾಠ ಸಹಕಾರ ಸಂಘದ ಆರ್.ಬಿ.ಸುರೇಶ್ ಬಾಬು ಮೋರೆ, ಪರಿಷತ್ ನಗರಾಧ್ಯಕ್ಷ ಬಿ.ಕೆ.ದಿನೇಶ್ ರಾವ್ ಚವ್ಹಾಣ್, ಶಿವಮೊಗ್ಗ ತಾಲೂಕು ಗ್ರಾಮಾಂತರ ಅಧ್ಯಕ್ಷ ಎಂ.ಡಿ.ದೇವರಾಜ್ ಶಿಂಧೆ ಪಾಲ್ಗೊಳ್ಳಲಿದ್ದಾರೆ. ಪರಿಷತ್ ಅಧ್ಯಕ್ಷ ಎಸ್.ಸುರೇಶ್ರಾವ್ ಸಾರೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
[su_quote cite=”ಆರ್.ಬಿ.ಸುರೇಶ್ಬಾಬು ಮೋರೆ, ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ”]ಸೂಡಾದಿಂದ ಖರೀದಿಸಿದ್ದ ನಿವೇಶನದಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿದ್ಯಾರ್ಥಿ ನಿಲಯದಲ್ಲಿ 29 ಕೊಠಡಿಗಳಿವೆ. ಈಗ ಉಳಿದಿರುವ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು.[/su_quote]
ಪರಿಷತ್ ಜಿಲ್ಲಾಧ್ಯಕ್ಷ ಆರ್.ಚಂದ್ರರಾವ್ ಘಾರ್ಗೆ, ಕಾರ್ಯಾಧ್ಯಕ್ಷ ಇ.ಚೂಡಾಮಣಿ ಪವಾರ್, ಉಪಾಧ್ಯಕ್ಷ ಎಚ್.ಸಿದ್ಧೋಜಿರಾವ್ ಜಾಧವ್, ಪ್ರಮುಖರಾದ ಡಿ.ಎಂ.ರಾಜ್ ಕುಮಾರ್ ಜಗತಾಪ್, ಬಿ.ಕೆ.ದಿನೇಶ್ ರಾವ್ ಚವ್ಹಾಣ್, ಡಿ.ತುಕಾರಾಂ ಮಾನೆ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗದ ಮಳಿಗೆ ಮೇಲೆ ಪೊಲೀಸರ ರೇಡ್, ಇಬ್ಬರು ಅರೆಸ್ಟ್, ದಾಖಲಾಯ್ತು ಕೇಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















