ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 APRIL 2024
SHIMOGA : ಸಚಿವ ಸಂತೋಷ್ ಲಾಡ್ ಅವರಿಗೆ ಅವಹೇಳನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಮರಾಠ ಸಮುದಾಯ ಮತ್ತು ಅಹಿಂದ ಸಮಾಜದ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಂದೆಯ ಹೆಸರಿಟ್ಟುಕೊಂಡು ವಿಜಯೇಂದ್ರ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಂತೋಷ್ ಲಾಡ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
[su_note note_color=”#ffe3b7″ text_color=”#000000″ radius=”1″]
ವಿಜಯೇಂದ್ರಗೆ ನೈತಿಕತೆ ಇಲ್ಲ
ತಂದೆ ಯಡಿಯೂರಪ್ಪ ಅವರ ಹೆಸರು ಇಲ್ಲದಿದ್ದರೆ ವಿಜಯೇಂದ್ರ ಅವರಿಗೆ ರಾಜಕಾರಣದಲ್ಲಿ ಕಿಮ್ಮತ್ತಿಲ್ಲ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಕುರಿತು ಮಾತನಾಡಲು ವಿಜಯೇಂದ್ರ ಅವರಿಗೆ ನೈತಿಕತೆ ಇಲ್ಲ. ಸಾವಿರಾರು ಬಡವರು, ವಿದ್ಯಾರ್ಥಿಗಳಿಗೆ ಸಂತೋಷ್ ಲಾಡ್ ನೆರವಾಗಿದ್ದಾರೆ. ಜನರೆ ಬಯಸಿ ಬೆಳೆಸಿದ ನಾಯಕ. ವಿಜಯೇಂದ್ರ ಅವರ ಟೀಕೆಗೆ ಶ್ರಮಿಕರು, ಬಡವರು, ವಿದ್ಯಾರ್ಥಿಗಳು ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮರಾಠ ಸಮಾಜದ ಮುಖಂಡ ಎಂ.ಪ್ರವೀಣ್ ಕುಮಾರ್ ಟೀಕಿಸಿದ್ದಾರೆ.[/su_note]
ಪ್ರತಿಭಟನೆಯಲ್ಲಿ ಮರಾಠ ಸಮುದಾಯದ ಪ್ರಮುಖರಾದ ಡಾ. ತಾನಾಜಿ ಸಚಿನ್ ರಾವ್ ಸಿಂದೆ, ಲೋಕೇಶ್ ರಾವ್, ದಿನೇಶ್ ರಾವ್, ಎಂ.ಬಿ.ಕವಿತಾ, ಕಿರಣ್ ಮೋರೆ, ಅಶೋಕ್ ರಾವ್ ಘೋರ್ಪಡೆ, ಪ್ರಶಾಂತ್ ರಾಯ್, ಜಿಎನ್ ಪರಶುರಾಮ್, ಪುನೀತ್ ರಾವ್, ಪುನೀತ್ ರಾವ್, ಅಹಿಂದ ಸಮಾಜಗಳ ಪ್ರಮುಖರಾದ ಹೆಚ್.ಸಿ.ಯೋಗೀಶ್, ರೇಖಾ ರಂಗನಾಥ್, ನಾಗರಾಜ್ ಕಂಕಾರಿ, ಚಂದ್ರಭೂಪಾಲ್, ಕೆ ರಂಗನಾಥ್, ಶರತ್, ಕಲೀಮ್ ಪಾಷಾ, ಎನ್.ಕೆ.ಶ್ಯಾಮಸುಂದರ್, ಶಿವಣ್ಣ , ಕುಮರೇಶ್, ಭಾಸ್ಕರ್, ಎಚ್ಪಿ ಗಿರೀಶ್ ವಿನಯ್ , ಲೋಕೇಶ್ , ಪವನ್ , ರಾಕೇಶ್, ಸುವರ್ಣ ನಾಗರಾಜ್ , ಸೌಗಂಧಿಕಾ , ಚಂದ್ರಕಲಾ, ಸ್ಟೆಲ್ಲಾ ಮಾರ್ಟಿನ್, ಸಂತೋಷ್ ಲಾಡ್ ಅಭಿಮಾನಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – ಕೆಲಸ ಹುಡುಕ್ತಿರೋರೆ ಹುಷಾರ್, ಯಾಮಾರಿದ್ರೆ ಶಿವಮೊಗ್ಗದ ಮಹಿಳೆಗಾದ ಸ್ಥಿತಿ ನಿಮಗೂ ಫಿಕ್ಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















