ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಕರ್ಫ್ಯೂ ಜಾರಿಗು ಮುನ್ನ ಮಹಾನಗರ ಪಾಲಿಕೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದು, ಕರೋನ ನಿಯಮ ಮರೆತು ವ್ಯಾಪಾರ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.

ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬೆಳಗ್ಗೆ ಖರೀದಿಗೆ ಜನ ಜಂಗುಳಿ ಸೇರಿತ್ತು. ಸಾಮಾಜಿಕ ಅಂತರ, ಮಾಸ್ಕ್ ಮರೆತು ಖರೀದಿಯಲ್ಲಿ ತೊಡಗಿದ್ದರು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಪದೇ ಪದೇ ಅನೌನ್ಸ್ ಮಾಡುತ್ತಿದ್ದರೂ ಪ್ರಯೋಜನವಾಗಲಿಲ್ಲ.
ಅಧಿಕಾರಿಗಳಿಂದ ದಿಢೀರ್ ಕಾರ್ಯಾಚರಣೆ
ಎಪಿಎಂಸಿ ಮಾರುಕಟ್ಟೆಯಲ್ಲಿ ದಿಢೀರ್ ದಾಳಿ ನಡೆಸಿದ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮಾಸ್ಕ್ ಧರಿಸದೆ ಮೈಮರೆತು ತರಕಾರಿ ಖರೀದಿಸುತ್ತಿದ್ದವರನ್ನು ಪತ್ತೆ ಹಚ್ಚಿ ದಂಡ ವಿಧಿಸಿದರು. ಅಧಿಕಾರಿಗಳು ದಂಡ ಹಾಕುತ್ತಿರುವ ವಿಚಾರ ತಿಳಿದು ಕೆಲವರು ಮಾಸ್ಕ್ ಧರಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
