ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಾಸ್ಕ್ ಜಾಗೃತಿ ಪಾದಯಾತ್ರೆ ನಡೆಸಲಾಯಿತು.
ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಗಾಂಧಿ ಬಜಾರ್ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಸಚಿವ ಈಶ್ವರಪ್ಪ ಪಾದಯಾತ್ರೆ ನಡೆಸಿದರು. ಈ ವೇಳೆ ಮಾಸ್ಕ್ ಧರಿಸದೆ ಗಾಂಧಿ ಬಜಾರ್ನಲ್ಲಿ ಓಡಾಡುತ್ತಿದ್ದವರಿಗೆ ಸಚಿವ ಈಶ್ವರಪ್ಪ ಮಾಸ್ಕ್ ವಿತರಿಸಿದರು. ಅಲ್ಲದೆ ಮಾಸ್ಕ್ ಧರಿಸಿಕೊಂಡು ಓಡಾಡುವಂತೆ ಮನವಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜನರು ಜಾಗೃತರಾಗಿದ್ದಾರೆ. ಅಲ್ಲಿಂದ ಇಲ್ಲಿ ತನಕ ನಡೆದು ಬಂದೆ. ಹತ್ತು ಮಾಸ್ಕ್ ಕೊಟಿದ್ದೇವಷ್ಟೆ. ಜಾಗೃತಿ ಮೂಡಿಸಲು ಸೀಮಿತವಾಗಿ ಮಾಡಿರುವ ಕಾರ್ಯ. ಉಳಿದ ಪ್ರದೇಶದಲ್ಲಿ ಜನರು ಇದನ್ನು ಮಾಡಬೇಕು. ಯಾರಾದರೂ ಮಾಸ್ಕ್ ಇಲ್ಲದೆ ಓಡಾಡುತ್ತಿದ್ದರೆ ಅವರಿಗೆ ಮಾಸ್ಕ್ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






