SHIVAMOGGA LIVE NEWS, 4 JANUARY 2024
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು (Maternal Death) ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಹರಿಹರ ಮೂಲದ ಕವಿತಾ ಮೃತ ಬಾಣಂತಿ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?
ಜನವರಿ 1ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ ಹೃದಯಾಘಾತ ಸಂಭವಿಸಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ತಿಳಿಸಿದ್ದಾರೆ.
ಗರ್ಭ ಚೀಲದಲ್ಲಿ ನೀರಿನ ಅಂಶ ಸೋರಿಕೆಯಾಗಿ ಹೊರ ಬರುತ್ತದೆ. ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಈ ನೀರಿನ ಅಂಶ ರಕ್ತನಾಳಕ್ಕೆ ಸೇರುತ್ತದೆ. ಆಗ ತೀವ್ರ ರಕ್ತಸ್ರಾವ ಉಂಟಾಗುತ್ತದೆ. ಇಂತಹ ಸಂದರ್ಭ ಹೃದಯಾಘಾತ ಸಂಭವಿಸುತ್ತದೆ.
ಡಾ. ತಿಮ್ಮಪ್ಪ, ವೈದ್ಯಕೀಯ ಅಧೀಕ್ಷಕ
ಬಾಣಂತಿ ಸಾವು ಪ್ರಕರಣ ಸಂಬಂಧ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮಟ್ಟದಲ್ಲಿ ಸಮಿತಿ ರಚಿಸಿ ಮಾಹಿತಿ ಪಡೆಯಲಾಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗು ಈ ಕುರಿತು ಸಂಪೂರ್ಣ ವಿವರಣೆ ನೀಡಬೇಕಾಗುತ್ತದೆ.
ಇದನ್ನೂ ಓದಿ » ಭದ್ರಾ ಡ್ಯಾಮ್ ನಾಲೆಗಳಿಗೆ ನೀರು ಹರಿಸುವ ದಿನಾಂಕ ಪ್ರಕಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200