ಶಿವಮೊಗ್ಗ ಪಾಲಿಕೆ ಮೇಯರ್ ಚುನಾವಣೆಗೆ ಬಿಗ್ ಟ್ವಿಸ್ಟ್, ಆಕಾಂಕ್ಷಿಗಳ ವಿರುದ್ಧ ಕಂಪ್ಲೇಂಟ್, ಏನದು ದೂರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 24 ಜನವರಿ 2020

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಇನ್ನು ಐದು ದಿನ ಬಾಕಿ ಇದೆ. ಅಷ್ಟರಲ್ಲಿ ಮೇಯರ್ ಸ್ಥಾನದ ಇಬ್ಬರು ಆಕಾಂಕ್ಷಿಗಳಿಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪೈಕಿ ಒಬ್ಬರು ಮೇಯರ್ ಸ್ಥಾನದ ಸ್ಪರ್ಧೆಯಿಂದಲೇ ಹಿಂದೆ ಉಳಿಯುವಂತಾಗಿದ್ದು, ಮತ್ತೊಬ್ಬರು ಪಾಲಿಕೆ ಸದಸ್ಯತ್ವವನ್ನೇ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

2019 readers copy new

ಜನವರಿ 29ರಂದು ಶಿವಮೊಗ್ಗ ಪಾಲಿಕೆ ಮೇಯರ್ ಚುನಾವಣೆಗೆ ದಿನಾಂಕ ನಿಗದಿ ಆಗಿದೆ. ಹಿಂದುಳಿದ ವರ್ಗ ಬಿ ಮಹಿಳೆಗೆ ಮೇಯರ್ ಸ್ಥಾನ ಮೀಸಲಾಗಿದೆ. ಆಡಳಿತ ಪಕ್ಷದ ಸುವರ್ಣ ಶಂಕರ್ ಮತ್ತು ಅನಿತಾ ರವಿಶಂಕರ್ ಅವರು ಸಂಭವನೀಯ ಅಭ್ಯರ್ಥಿಗಳಾಗಿದ್ದಾರೆ.

ಆಕಾಂಕ್ಷಿಗಳಿಗೆ ಸಂಕಷ್ಟ ಎದುರಾಗಿರುವುದು ಏಕೆ?

ಮೇಯರ್ ಸ್ಥಾನದ ಆಕಾಂಕ್ಷಿ ಸುವರ್ಣ ಶಂಕರ್ ಅವರ ಜಾತಿ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ರದ್ದುಗೊಳಿಸಿದ್ದಾರೆ. ಇದು ಸುವರ್ಣ ಶಂಕರ್ ಅವರಿಗೆ ಆಘಾತ ಉಂಟು ಮಾಡಿದೆ. ಉಪ ವಿಭಾಗಾಧಿಕಾರಿ ಅವರ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸುರ್ವಣ ಶಂಕರ್ ನಿರ್ಧರಿಸಿದ್ದಾರೆ.

ಉಪ ವಿಭಾಗಾಧಿಕಾರಿ ನಿರ್ಧಾರಕ್ಕೆ ಕಾರಣವೇನು?

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಜಾತಿ ಪ್ರಮಾಣ ಪತ್ರ ಬೇಕು. ಈ ಪ್ರಮಾಣ ಪತ್ರ ಪಡೆಯಲು ಅಭ್ಯರ್ಥಿಯು ಆದಾಯ, ವೃತ್ತಿ ಮತ್ತು ಮಾರಾಟ ತೆರಿಗೆದಾರರಾಗಿರಬಾರದು. ಭೂ ಹಿಡುವಳಿ 8 ಹೆಕ್ಟೇರ್ ಮೀರಿರಬಾರದು ಎಂಬ ತಾಂತ್ರಿಕ ದೋಷ ಇಟ್ಟುಕೊಂಡು ಇಬ್ಬರ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು ಎಂದು ದೂರು ಸಲ್ಲಿಕೆಯಾಗಿದ್ದವು. ಇದನ್ನು ಪರಿಶೀಲಿಸಿ ಸುವರ್ಣ ಶಂಕರ್ ಅವರ ಪ್ರಮಾಣ ಪತ್ರ ರದ್ದುಗೊಳಿಸಲಾಗಿದೆ.

83669750 1037118553316231 2723434463131336704 n.jpg? nc cat=102& nc ohc=dqg6x32qX1MAX CNY8K& nc ht=scontent.fblr11 1

ಸುವರ್ಣ ಶಂಕರ್ ಪ್ರಮಾಣ ಪತ್ರ ರದ್ದು

83803280 1037119546649465 7009608260269375488 o.jpg? nc cat=105& nc ohc=SULRvyrGQ2kAX fDTcy& nc ht=scontent.fblr11 1

ಸುವರ್ಣ ಶಂಕರ್ ಅವರು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಚುನಾವಣೆ ಸಂದರ್ಭ ಅವರಿಗೆ ಜಾತಿ ಪ್ರಮಾಣ ಪತ್ರದ ಅಗತ್ಯವಿರಲಿಲ್ಲ. ಮೇಯರ್ ಸ್ಥಾನದ ಚುನಾವಣಗೆ ಸ್ಪರ್ಧಿಸಲು ತಹಶೀಲ್ದಾರ್ ಅವರಿಂದ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಆದರೆ ಸುವರ್ಣ ಶಂಕರ್ ಅವರ ಕುಟುಂಬ ಈ ನಿಯಮದ ಅಡಿಗೆ ಬರುವುದರಿಂದ, ಅವರ ಪ್ರಮಾಣ ಪತ್ರವನ್ನು ಉಪವಿಭಾಗಾಧಿಕಾರಿ ರದ್ದುಗೊಳಿಸಿದ್ದಾರೆ.

ಅನಿತಾ ರವಿಶಂಕರ್’ಗೆ ಎದುರಾಗಿರುವ ಸಂಕಷ್ಟವೇನು?

83720846 1037119526649467 8489283661210845184 o.jpg? nc cat=109& nc ohc=B3SCbswzcJkAX9Swkzi& nc ht=scontent.fblr11 1

ಮೇಯರ್ ಸ್ಥಾನದ ಮತ್ತೊಬ್ಬ ಪ್ರಬಲ ಆಕಾಂಕ್ಷಿ ಅನಿತಾ ರವಿಶಂಕರ್ ಅವರು ಬಿಸಿಎಂ ಬಿ ಮೀಸಲು ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಅವರ ಕುಟುಂಬ ಕೂಡ ಆದಾಯ, ವೃತ್ತಿ ತೆರಿಗೆ ಪಾವತಿದಾರರಾಗಿದ್ದಾರೆ. ಹಾಗಾಗಿ ಅವರ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು ಎಂದು ದೂರುದಾರರು ಮನವಿ ಮಾಡಿದ್ದಾರೆ. ಅದರೆ ಅನಿತಾ ರವಿಶಂಕರ್ ಅವರು ಈಗಾಗಲೇ ಚುನಾಯಿತರಾಗಿದ್ದಾರೆ. ಹಾಗಾಗಿ ಅವರ ಪ್ರಮಾಣ ಪತ್ರವನ್ನು ರದ್ದುಗೊಳಿಸುವ ಅಧಿಕಾರ ಉಪ ವಿಭಾಗಾಧಿಕಾರಿಗೆ ಇಲ್ಲ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗುತ್ತದೆ. ಒಂದು ವೇಳೆ ಈ ಕುರಿತು ಯಾರಾದರು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ, ಅನಿತಾ ರವಿಶಂಕರ್ ಅವರ ಸದಸ್ಯತ್ವಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಧ್ಯ ಪ್ರವೇಶ ಮಾಡುತ್ತಾರಾ ವರಿಷ್ಠರು?

ಮೇಯರ್ ಆಕಾಂಕ್ಷಿಗಳಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು, ಈಗ ವರಿಷ್ಠರು ಮಧ್ಯಪ್ರವೇಶ ಮಾಡುವ ಸಾದ್ಯತೆ ಇದೆ. ಜ.29ಕ್ಕೆ ಮೇಯರ್ ಚುನಾವಣೆ ನಿಗದಿ ಆಗಿದೆ. ಹಾಗಾಗಿ ಇನ್ನೆರಡು ದಿನದಲ್ಲಿ ಈ ಸಂಕಷ್ಟ ನಿವಾರಿಸುವ ಸಲುವಾಗಿ ಸಭೆ ನಡೆಸುವ ಸಾದ್ಯತೆ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment