ಕಣ್ಣೀರು ಹಾಕುತ್ತ ಬಿಜೆಪಿ ಕಚೇರಿಯಿಂದ ಹೊರ ನಡೆದ ಮೇಯರ್ ಆಕಾಂಕ್ಷಿ, ಕೊನೆಗೂ ಮೇಯರ್, ಉಪಮೇಯರ್ ಹೆಸರು ಫೈನಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020

ಮೈಸೂರಿನಿಂದ ಬಂದರು ಬಿಜೆಪಿ ಕಾರ್ಪೊರೇಟರ್’ಗಳು. ಕಣ್ಣೀರು ಹಾಕುತ್ತ ಹೊರ ಸಭೆಯಿಂದ ಹೊರ ನಡೆದ ಮೇಯರ್ ಆಕಾಂಕ್ಷಿ. ಮಹತ್ವದ ಸಭೆಯಲ್ಲಿ ಮೇಯರ್, ಉಪ ಮೇಯರ್ ಅಭ್ಯರ್ಥಿಗಳ ಘೋಷಣೆ.

ಮೇಯರ್, ಉಪ ಮೇಯರ್ ಆಯ್ಕೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಇವತ್ತು ಮಹತ್ವದ ಸಭೆ ನಡೆಯಿತು. ಸಚಿವ ಕೆ.ಎಸ್.ಈಶ್ವರಪ್ಪ ಸಭೆಯ ನೇತೃತ್ವ ವಹಿಸಿದ್ದರು.

ಮೈಸೂರಿಗೆ ತೆರಳಿದ್ದ ಬಿಜೆಪಿ ಕಾರ್ಪೊರೇಟರ್‌ಗಳು ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ನೇರವಾಗಿ ಬಿಜೆಪಿ ಕಚೇರಿಗೆ ಆಗಮಿಸಿದ ಕಾರ್ಪೊರೇಟರ್‌ಗಳು ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಮೇಯರ್, ಉಪ ಮೇಯರ್ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಯಿತು.

ಅಂತಿಮವಾಗಿ ಮೇಯರ್ ಸ್ಥಾನಕ್ಕೆ ಸುವರ್ಣ ಶಂಕರ್, ಉಪ ಮೇಯರ್ ಸ್ಥಾನಕ್ಕೆ ಸುರೇಖಾ ಮುರಳೀಧರ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಮೇಯರ್ ಸ್ಥಾನ ಕೈ ತಪ್ಪಿದ ಹಿನ್ನೆಲೆ ಆಕಾಂಕ್ಷಿ ಅನಿತಾ ರವಿಶಂಕರ್ ಕಣ್ಣೀರು ಹಾಕಿದರು. ದುಃಖದಿಂದಲೇ ಸಭೆಯಿಂದ ಹೊರ ನಡೆದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2020

Leave a Comment