ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020
ಮೈಸೂರಿನಿಂದ ಬಂದರು ಬಿಜೆಪಿ ಕಾರ್ಪೊರೇಟರ್’ಗಳು. ಕಣ್ಣೀರು ಹಾಕುತ್ತ ಹೊರ ಸಭೆಯಿಂದ ಹೊರ ನಡೆದ ಮೇಯರ್ ಆಕಾಂಕ್ಷಿ. ಮಹತ್ವದ ಸಭೆಯಲ್ಲಿ ಮೇಯರ್, ಉಪ ಮೇಯರ್ ಅಭ್ಯರ್ಥಿಗಳ ಘೋಷಣೆ.
ಮೇಯರ್, ಉಪ ಮೇಯರ್ ಆಯ್ಕೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಇವತ್ತು ಮಹತ್ವದ ಸಭೆ ನಡೆಯಿತು. ಸಚಿವ ಕೆ.ಎಸ್.ಈಶ್ವರಪ್ಪ ಸಭೆಯ ನೇತೃತ್ವ ವಹಿಸಿದ್ದರು.
ಮೈಸೂರಿಗೆ ತೆರಳಿದ್ದ ಬಿಜೆಪಿ ಕಾರ್ಪೊರೇಟರ್ಗಳು ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ನೇರವಾಗಿ ಬಿಜೆಪಿ ಕಚೇರಿಗೆ ಆಗಮಿಸಿದ ಕಾರ್ಪೊರೇಟರ್ಗಳು ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಮೇಯರ್, ಉಪ ಮೇಯರ್ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಯಿತು.
ಅಂತಿಮವಾಗಿ ಮೇಯರ್ ಸ್ಥಾನಕ್ಕೆ ಸುವರ್ಣ ಶಂಕರ್, ಉಪ ಮೇಯರ್ ಸ್ಥಾನಕ್ಕೆ ಸುರೇಖಾ ಮುರಳೀಧರ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಮೇಯರ್ ಸ್ಥಾನ ಕೈ ತಪ್ಪಿದ ಹಿನ್ನೆಲೆ ಆಕಾಂಕ್ಷಿ ಅನಿತಾ ರವಿಶಂಕರ್ ಕಣ್ಣೀರು ಹಾಕಿದರು. ದುಃಖದಿಂದಲೇ ಸಭೆಯಿಂದ ಹೊರ ನಡೆದರು.
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





