ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಅಮೃತ್ ಯೋಜನೆ 2.0ಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದ್ದು ಅವರು ಸೆ.30ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗ, ಮೈಸೂರು, ದಾವಣಗೆರೆ ಪಾಲಿಕೆ ಮೇಯರ್ಗಳು ಹಾಗೂ 10 ನಗರಸಭೆ ಅಧ್ಯಕ್ಷರಿಗೆ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ. ಈ ಗೌರವಕ್ಕೆ ಶಿವಮೊಗ್ಗದ ಪ್ರಥಮ ಪ್ರಜೆ ಸುನೀತಾ ಅಣ್ಣಪ್ಪ ಕೂಡ ಪಾತ್ರರಾಗಿರುವುದು ವಿಶೇಷ.
ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ್ ಯೋಜನೆಯ 2ನೇ ಹಂತದ ಉದ್ಘಾಟನೆ ಜತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆ ಬಗ್ಗೆ ವಿಚಾರ ಸಂಕಿರಣಗಳನ್ನೂ ಏರ್ಪಡಿಸಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿರುವುದಕ್ಕೆ ಖುಷಿಯಾಗಿದೆ. ಅಲ್ಲಿ ಪಡೆಯುವ ಅನುಭವವನ್ನು ನಗರದ ಅಭಿವೃದ್ಧಿಗೆ ಅಳವಡಿಸಲು ಪಯತ್ನಿಸುತ್ತೇನೆ ಎಂದು ಮೇಯರ್ ಸುನೀತಾ ಅಣ್ಣಪ್ಪ ಪ್ರತಿಕ್ರಿಯಿಸಿದ್ದಾರೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






