
ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕುವೆಂಪು ರಸ್ತೆಗೆ ಹೊಂದಿಕೊಂಡಂತೆ ಇರುವ ಖಾಸಗಿ ಆಸ್ಪತ್ರೆಗಳ ಬಳಿ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಕುರಿತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮತ್ತು ಕಾರ್ಪೊರೇಟರ್ಗಳು ಪರಿಶೀಲನೆ ನಡೆಸಿದರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಮಿಷನರ್ ಚಿದಾನಂದ ವಟಾರೆ, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ನೇತೃತ್ವದ ನಿಯೋಗ ಟ್ರಾಫಿಕ್ ಸಮಸ್ಯೆ ಕುರಿತು ಪರಿಶೀಲನೆ ನಡೆಸಿತು.
ಯಾವಾಗಲೂ ಟ್ರಾಫಿಕ್ ಜಾಮ್
- ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ ಬಳಿ ಯಾವಾಗಲೂ ಟ್ರಾಫಿಕ್ ಜಾಮ್ ಆಗುತ್ತದೆ.
- ಆಸ್ಪತ್ರೆಗೆ ಬರುವವರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಜ್ ಜಾಮ್ ಆಗುತ್ತದೆ.
- ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಬೈಕು, ಕಾರು, ಆಂಬುಲೆನ್ಸ್ಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗುತ್ತಿದೆ.
- ಪಾರ್ಕಿಂಗ್ ಸಮಸ್ಯೆಯಿಂದಾಗಿ ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
- ಆಸ್ಪತ್ರೆಗಳಷ್ಟೆ ಅಲ್ಲ ಈ ಭಾಗದಲ್ಲಿ ಹೊಟೇಲ್ಗಳು, ಕಚೇರಿಗಳು ಇರುವುದರಿಂದ ವಾಹನಗಳನ್ನು ರಸ್ತೆಗೆ ತಂದು ನಿಲ್ಲಿಸಲಾಗುತ್ತಿದೆ.
ಎಡ ಬಲ ಪಾಲಿಸಿಯೋ, ಒನ್ ವೇ ರಸ್ತೆಯೋ
ಒಂದು ದಿನ ಎಡ ಭಾಗದಲ್ಲಿ ಪಾರ್ಕಿಂಗ್, ಮತ್ತೊಂದು ದಿನ ಬಲ ಭಾಗದಲ್ಲಿ ಪಾರ್ಕಿಂಗ್ ಮಾಡುವ ಕುರಿತು ಚಿಂತಿಸಲಾಗಿದೆ. ಇಲ್ಲವಾದರೆ ಈ ರಸ್ತೆಯಲ್ಲಿ ಒನ್ ವೇ ವ್ಯವಸ್ಥೆ ಮಾಡಬೇಕೋ ಅನ್ನುವ ಕುರಿತು ಯೋಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಡಿವೈಎಸ್ಪಿ ಅವರೊಂದಿಗೆ ಚರ್ಚಿಸಲು ನಿರ್ಧರಿಸಲಾಗಿದೆ.
ಕನ್ಸರ್ವೆನ್ಸಿಯಲ್ಲಿ ಪಾರ್ಕಿಂಗ್
ಆಸ್ಪತ್ರೆಯ ಎರಡು ಕಡೆಯಲ್ಲಿ ಕನ್ಸರ್ವೆನ್ಸಿಗಳಿವೆ. ಈ ಕನ್ಸರ್ವೆನ್ಸಿಗಳನ್ನು ಬಳಕೆ ಮಾಡಿಕೊಂಡು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬಹುದಾಗಿದೆ. ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆ ನಡುವಿನ ಕನ್ಸರ್ವೆನ್ಸಿಯಲ್ಲಿ ಸದ್ಯಕ್ಕೆ ಆಸ್ಪತ್ರೆಯ ಸಿಬ್ಬಂದಿಗಳ ಕಾರುಗಳನ್ನಷ್ಟೇ ಪಾರ್ಕ್ ಮಾಡಲಾಗುತ್ತಿದೆ.
ಸೆಲ್ಲರ್ ತೆರವಿನಿಂದ ಎಲ್ಲವು ಸರಿ ಹೋಗಿತ್ತು
ಚಾರುಲತಾ ಸೋಮಲ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಆಗಿದ್ದಾಗ ಸೆಲ್ಲರ್ ತೆರವು ಕಾರ್ಯಾಚರಣೆ ಮಾಡಿದ್ದರು. ಆಗ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿತ್ತು. ಅಲ್ಲದೆ ಸೆಲ್ಲರ್ಗಳು ತೆರವಾದಾಗ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದೂರಾಗಿತ್ತು. ಈ ಕುರಿತು ಪಾಲಿಕೆ ಮತ್ತು ಪೊಲೀಸ್ ಇಲಾಖೆ ಹೆಚ್ಚು ಯೋಚಿಸಬೇಕಿದೆ.
ಆಸ್ಪತ್ರೆಗಳಿಗೆ ಬರುವ ವಾಹನಗಳಿಂದಾಗಿ ಕುವೆಂಪು ರಸ್ತೆ, ಅಚ್ಚುತರಾವ್ ಬಡಾವಣೆಯ ರಸ್ತೆಗಳು, ದುರ್ಗಿಗುಡಿಯ ವಿವಿಧ ಕ್ರಾಸ್ಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಚಿಂತಿಸಬೇಕಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು






