ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಕುವೆಂಪು ರಸ್ತೆಗೆ ಹೊಂದಿಕೊಂಡಂತೆ ಇರುವ ಖಾಸಗಿ ಆಸ್ಪತ್ರೆಗಳ ಬಳಿ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಕುರಿತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮತ್ತು ಕಾರ್ಪೊರೇಟರ್ಗಳು ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಮಿಷನರ್ ಚಿದಾನಂದ ವಟಾರೆ, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ನೇತೃತ್ವದ ನಿಯೋಗ ಟ್ರಾಫಿಕ್ ಸಮಸ್ಯೆ ಕುರಿತು ಪರಿಶೀಲನೆ ನಡೆಸಿತು.
ಯಾವಾಗಲೂ ಟ್ರಾಫಿಕ್ ಜಾಮ್
- ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ ಬಳಿ ಯಾವಾಗಲೂ ಟ್ರಾಫಿಕ್ ಜಾಮ್ ಆಗುತ್ತದೆ.
- ಆಸ್ಪತ್ರೆಗೆ ಬರುವವರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಜ್ ಜಾಮ್ ಆಗುತ್ತದೆ.
- ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಬೈಕು, ಕಾರು, ಆಂಬುಲೆನ್ಸ್ಗಳನ್ನು ರಸ್ತೆ ಮೇಲೆ ನಿಲ್ಲಿಸಲಾಗುತ್ತಿದೆ.
- ಪಾರ್ಕಿಂಗ್ ಸಮಸ್ಯೆಯಿಂದಾಗಿ ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
- ಆಸ್ಪತ್ರೆಗಳಷ್ಟೆ ಅಲ್ಲ ಈ ಭಾಗದಲ್ಲಿ ಹೊಟೇಲ್ಗಳು, ಕಚೇರಿಗಳು ಇರುವುದರಿಂದ ವಾಹನಗಳನ್ನು ರಸ್ತೆಗೆ ತಂದು ನಿಲ್ಲಿಸಲಾಗುತ್ತಿದೆ.
ಎಡ ಬಲ ಪಾಲಿಸಿಯೋ, ಒನ್ ವೇ ರಸ್ತೆಯೋ
ಒಂದು ದಿನ ಎಡ ಭಾಗದಲ್ಲಿ ಪಾರ್ಕಿಂಗ್, ಮತ್ತೊಂದು ದಿನ ಬಲ ಭಾಗದಲ್ಲಿ ಪಾರ್ಕಿಂಗ್ ಮಾಡುವ ಕುರಿತು ಚಿಂತಿಸಲಾಗಿದೆ. ಇಲ್ಲವಾದರೆ ಈ ರಸ್ತೆಯಲ್ಲಿ ಒನ್ ವೇ ವ್ಯವಸ್ಥೆ ಮಾಡಬೇಕೋ ಅನ್ನುವ ಕುರಿತು ಯೋಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಡಿವೈಎಸ್ಪಿ ಅವರೊಂದಿಗೆ ಚರ್ಚಿಸಲು ನಿರ್ಧರಿಸಲಾಗಿದೆ.
ಕನ್ಸರ್ವೆನ್ಸಿಯಲ್ಲಿ ಪಾರ್ಕಿಂಗ್
ಆಸ್ಪತ್ರೆಯ ಎರಡು ಕಡೆಯಲ್ಲಿ ಕನ್ಸರ್ವೆನ್ಸಿಗಳಿವೆ. ಈ ಕನ್ಸರ್ವೆನ್ಸಿಗಳನ್ನು ಬಳಕೆ ಮಾಡಿಕೊಂಡು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬಹುದಾಗಿದೆ. ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆ ನಡುವಿನ ಕನ್ಸರ್ವೆನ್ಸಿಯಲ್ಲಿ ಸದ್ಯಕ್ಕೆ ಆಸ್ಪತ್ರೆಯ ಸಿಬ್ಬಂದಿಗಳ ಕಾರುಗಳನ್ನಷ್ಟೇ ಪಾರ್ಕ್ ಮಾಡಲಾಗುತ್ತಿದೆ.
ಸೆಲ್ಲರ್ ತೆರವಿನಿಂದ ಎಲ್ಲವು ಸರಿ ಹೋಗಿತ್ತು
ಚಾರುಲತಾ ಸೋಮಲ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಆಗಿದ್ದಾಗ ಸೆಲ್ಲರ್ ತೆರವು ಕಾರ್ಯಾಚರಣೆ ಮಾಡಿದ್ದರು. ಆಗ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿತ್ತು. ಅಲ್ಲದೆ ಸೆಲ್ಲರ್ಗಳು ತೆರವಾದಾಗ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದೂರಾಗಿತ್ತು. ಈ ಕುರಿತು ಪಾಲಿಕೆ ಮತ್ತು ಪೊಲೀಸ್ ಇಲಾಖೆ ಹೆಚ್ಚು ಯೋಚಿಸಬೇಕಿದೆ.
ಆಸ್ಪತ್ರೆಗಳಿಗೆ ಬರುವ ವಾಹನಗಳಿಂದಾಗಿ ಕುವೆಂಪು ರಸ್ತೆ, ಅಚ್ಚುತರಾವ್ ಬಡಾವಣೆಯ ರಸ್ತೆಗಳು, ದುರ್ಗಿಗುಡಿಯ ವಿವಿಧ ಕ್ರಾಸ್ಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಚಿಂತಿಸಬೇಕಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]