SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಶಿವಮೊಗ್ಗದಲ್ಲಿ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ ಎಂದು ತಿಳಿಸಿದರು.
ಬೇರೆ ಪಕ್ಷದವರೊಂದಿಗೆ ಊಟ ಸಹಜ
ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದರೆ ಅದಕ್ಕೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ಆರ್.ಅಶೋಕ್ ಬಿಜೆಪಿಯ ಅನೇಕ ಮುಖಂಡರು ನಮ್ಮ ಮನೆಗು ಬಂದು ಹೋಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಮನೆಗೆ ನಾನು ಹೋಗಿದ್ದೆ. ಹಾಗೆಂದ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ » ಕ್ವಿಂಟಾಲ್ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?