ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ ಎಂದು ತಿಳಿಸಿದರು.

minister-MB-Patil-in-Shimoga-airport

ಬೇರೆ ಪಕ್ಷದವರೊಂದಿಗೆ ಊಟ ಸಹಜ

ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದರೆ ಅದಕ್ಕೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ಆರ್‌.ಅಶೋಕ್‌ ಬಿಜೆಪಿಯ ಅನೇಕ ಮುಖಂಡರು ನಮ್ಮ ಮನೆಗು ಬಂದು ಹೋಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಮನೆಗೆ ನಾನು ಹೋಗಿದ್ದೆ. ಹಾಗೆಂದ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದರು.

Kalleshwara-Enterprises.webp

ಇದನ್ನೂ ಓದಿ » ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment