ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ಲೋಪ ಆಗದಂತೆ ಸೌಲಭ್ಯ ಕಲ್ಪಿಸಬೇಕು. ವೈದ್ಯರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಮೆಗ್ಗಾನ್ ಆಸ್ಪತ್ರೆಯ ಸಭಾಂಗಣದಲ್ಲಿ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೆಗ್ಗಾನ್ ಆಸ್ಪತ್ರೆ ವಿವಿಧ ವಿಭಾಗಗಳ ವೈದ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಿ, ವೈದ್ಯರ ಕುಂದುಕೊರತೆ ಆಲಿಸಿದರು.
ರೋಗಿಗಳಿಗೆ ಒಳ್ಳೆಯದಾಗಬೇಕು ಅನ್ನುವ ಸಲುವಾಗಿ ನಿಮ್ಮ ಪ್ರಯತ್ನವೇನೂ ಎಂದು ಪ್ರಶ್ನಿಸಿ, ತರಾಟೆಗೆ ತೆಗೆದುಕೊಂಡರು. ನಿಮ್ಮ ಶಿಕ್ಷಣ ಅನುಭವಗಳಿಂದ ರೋಗಿಗಳಿಗೆ ಯಾವ ಅನುಕೂಲವಾಗುತ್ತಿದೆ. ರಾಜ್ಯದಲ್ಲಿಯೇ ಮೆಗ್ಗಾನ್ ಆಸ್ಪತ್ರೆಯನ್ನು ಮಾದರಿಯಾಗಿ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ವ್ಯವಸ್ಥೆ ಸುಧಾರಿಸಬೇಕು. ಮೆಗ್ಗಾನ್ ಆಸ್ಪತ್ರೆಗೆ ಬರುವ ರೋಗಿಗಳು ಇಲ್ಲಿನ ವ್ಯವಸ್ಥೆ ಸುಧಾರಿಸಿದೆ ಎಂದು ಹೇಳಬೇಕು ಎಂದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಗೆ ಬರುವ ಹೆಚ್ಚಿನ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳಿಸಲಾಗುತ್ತಿದೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. ಲೋಪಗಳನ್ನು ಗುರುತಿಸಿ ಎಲ್ಲ ವಿಭಾಗಗಳಿಗೆ ಅಗತ್ಯ ವೈದ್ಯರನ್ನು ನೇಮಿಸಬೇಕು ಎಂದು ಹೇಳಿದರು.
ಸಾಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಕಾರಿ ಕೆ.ಬಿ.ಶಿವಕುಮಾರ್, ಸಿಇಓ ವೈಶಾಲಿ, ಆಸ್ಪತ್ರೆ ಸಲಹಾ ಸಮಿತಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200