ಶಿವಮೊಗ್ಗ ಲೈವ್
ಶಿವಮೊಗ್ಗ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 4 ರಂದು ಶಿವಮೊಗ್ಗ ಸಿಟಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆದೇಶಿಸಿದೆ.

ಮಾಂಸ ಮಾರಾಟದ ಉದ್ದಿಮೆದಾರರು ಅಂದು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ಮಾಂಸ ಮಾರಾಟ ಸಂಪೂರ್ಣ ಸ್ಥಗಿತಗೊಳಿಸಬೇಕು. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ
ಆಟೋ ಕಾಂಪ್ಲೆಕ್ಸ್ನ ಗ್ಯಾರೇಜ್ ಮೇಲೆ ಅಧಿಕಾರಿಗಳಿಂದ ದಿಢೀರ್ ದಾಳಿ