ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | PARK| 28 ಏಪ್ರಿಲ್ 2022
ಶಿವಮೊಗ್ಗದ ಹಳೆ ಜೈಲು ಆವರಣದ ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಪಾರ್ಕ್ ಎಂದು ನಾಮಕರಣ ಮಾಡಬೇಕು. ಈ ಪಾರ್ಕ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ ಆಗ್ರಹಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಎಸ್.ದತ್ತಾತ್ರಿ ಅವರು ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ಏನಿದೆ?
ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಅವರ ಹೆಸರು ಇಡಬೇಕು. ಆದರೆ ಅದರ ನಿರ್ವಹಣೆ, ವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು.
ಫ್ರೀಡಂ ಪಾರ್ಕ್’ನಲ್ಲಿ ವಾಕಿಂಗ್ ಪಾತ್ ನಿರ್ಮಿಸಲಾಗಿದೆ. ಇದರ ಮೇಲೆ ದ್ವಿಚಕ್ರ ವಾಹನ ಚಲಾವಣೆ ಮಾಡಲಾಗುತ್ತಿದೆ. ಹಾಗಾಗಿ ವಾಕಿಂಗ್ ಮಾಡುವವರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೆ ವಾಕಿಂಗ್ ಪಾತ್ ಹಾಳಾಗುವ ಸಂಭವವಿದೆ. ಇಲ್ಲಿ ವಾಹನ ಚಲಾವಣೆಗೆ ಕಡಿವಾಣ ಹಾಕಬೇಕು.
ರಾತ್ರಿ ವೇಳೆ ಫ್ರೀಡಂ ಪಾರ್ಕ್’ನಲ್ಲಿ ಮದ್ಯ ಸೇವನೆ ಮಾಡಿ, ಬಾಟಲಿಗಳು, ತಿಂಡಿ, ತಿನಿಸುಗಳನ್ನು ಅಲ್ಲಿಯೆ ಬಿಸಾಡಿ ಹೋಗುತ್ತಿದ್ದಾರೆ. ಇವುಗಳಿಗೆ ನಿಯಂತ್ರಣ ಹೇರಲು ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕು. ಅಲ್ಲದೆ ರಾತ್ರಿ ವೇಳೆ ವಿದ್ಯುತ್ ದೀಪಗಳನ್ನು ಬಂದ್ ಮಾಡುವ ವ್ಯವಸ್ಥೆ ಮಾಡಬೇಕು. ನಿಯಮಿತವಾಗಿ ಶೌಚಾಲಯಗಳ ಸ್ವಚ್ಛತೆ ಮಾಡಿಸಬೇಕು ಎಂದು ಎಸ್.ದತ್ತಾತ್ರಿ ಅವರು ಮನವಿಯಲ್ಲಿ ತಿಳಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 5 ರಂದು ಅಧಿಕಾರಿಗಳೊಂದಿಗೆ ಫ್ರೀಡಂ ಪಾರ್ಕ್ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ವೇಳೆ ಪ್ರಮುಖರಾದ ರಿಷಿಕೇಶ್ ಪೈ, ಸುಹಾಸ್ ಶಾಸ್ತ್ರಿ, ದಿನೇಶ್ ಆಚಾರ್ಯ, ಶರತ್ ಕಲ್ಯಾಣಿ, ಚೇತನ್, ವಿನ್ಸೆಂಟ್, ಶ್ರೀಹರಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಗಾಂಧಿ ಬಜಾರ್’ಗೆ ಹೋಗುತ್ತಿದ್ದ ಯುವಕನ ಮೇಲೆ ಬೈಕಲ್ಲಿ ಅಡ್ಡಾದಿಡ್ಡಿ ಬಂದವರಿಂದ ಹಲ್ಲೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















