ಶಿವಮೊಗ್ಗ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಏನೇನೆಲ್ಲ ಇದೆ?
- ಲೈಸೆನ್ಸ್ ಪಡೆಯುವ ಸಂದರ್ಭ ನಿಗದಿಪಡಿಸಿದ್ದಕ್ಕಿಂತಲು ಹೆಚ್ಚಿನ ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ.
- ಸೆಟ್ ಬ್ಯಾಕ್, ಅಗ್ನಿಶಾಮಕ ವಾಹನ ತೆರಳಲು ಸೂಕ್ತ ಜಾಗ ಬಿಡದೆ ಕಟ್ಟಡ ನಿರ್ಮಾಣ ಮಾಡಲಾಗಿದೆ.
- ರಸ್ತೆಗಳು, ಚರಂಡಿಗಳನ್ನು ಒತ್ತುವರಿ ಮಾಡಲಾಗಿದೆ. ಅವುಗಳ ಮೇಲೆ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ರಸ್ತೆಯಲ್ಲಿ ಬೋರ್ವೆಲ್, ಟ್ರಾನ್ಸ್ಫಾರ್ಮರ್ ಅಳವಡಿಸಲಾಗಿದೆ.
- ಸೂಕ್ತ ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಮೇಲೆ ವಾಹನ ನಿಲುಗಡೆ ಮಾಡಿ ಟ್ರಾಫಿಕ್ ಜಾಮ್ ಉಂಟು ಮಾಡುತ್ತಿದ್ದಾರೆ.
2004 ರಿಂದ 2024ರವರೆಗೆ ಕಟ್ಟಡಗಳಿಗೆ ನೀಡಿರುವ ಲೈಸೆನ್ಸ್ ಮತ್ತು ಪರವಾನಗಿ ನೀಡಿದ ಅಧಿಕಾರಿಗಳ ಆಸ್ತಿಪಾಸ್ತಿ ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ನಗರ ಘಟಕ ಕಾರ್ಯಾಧ್ಯಕ್ಷೆ ಎನ್.ರೂಪ, ನವೀನ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಹೋಮ್ ಗಾರ್ಡ್ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್, ಏನಿದು ಕೇಸ್?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200