SHIVAMOGGA LIVE NEWS | 19 MARCH 2023
SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂಬ ಒತ್ತಾಯವಿತ್ತು. ಅದರೆ ಯಡಿಯೂರಪ್ಪ ಅವರು ತಮ್ಮ ಹೆಸರು ಬೇಡ, ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಸೂಚಿಸಿ ಹೃದಯ ವೈಶಾಲ್ಯತೆ ಮರೆದಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.
ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?
ಬಸವೇಶ್ವರ ವೀರಶೈವ ಸಂಘದ ನಿರ್ದೇಶಕ ಮೋಹನ್ ಬಾಳೆಕಾಯಿ, ಅನಿತಾ ರವಿಶಂಕರ್, ಮಹೇಶ್ ಮೂರ್ತಿ, ಪ್ರಮುಖರಾದ ಉಮೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

LATEST NEWS
About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP











