| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 19 MARCH 2023
SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
![]()
ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂಬ ಒತ್ತಾಯವಿತ್ತು. ಅದರೆ ಯಡಿಯೂರಪ್ಪ ಅವರು ತಮ್ಮ ಹೆಸರು ಬೇಡ, ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಸೂಚಿಸಿ ಹೃದಯ ವೈಶಾಲ್ಯತೆ ಮರೆದಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.
ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?
ಬಸವೇಶ್ವರ ವೀರಶೈವ ಸಂಘದ ನಿರ್ದೇಶಕ ಮೋಹನ್ ಬಾಳೆಕಾಯಿ, ಅನಿತಾ ರವಿಶಂಕರ್, ಮಹೇಶ್ ಮೂರ್ತಿ, ಪ್ರಮುಖರಾದ ಉಮೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()