ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮರುದಿನವೇ ಮಧ್ಯವರ್ತಿಗಳು ಅರ್ಜಿ ಸಲ್ಲಿಸುವ ನೆಪದಲ್ಲಿ ಆಟೋ ಚಾಲಕರಿಂದ ಹಣ ಕೀಳುತ್ತಿದ್ದಾರೆ ಎಂದು ಸ್ಮಾರ್ಟ್ ಸಿಟಿ ಆಟೋ ಚಾಲಕರ ಸಂಘದ ಅಧ್ಯಕ್ಷ ಡಿ.ಕೃಷ್ಣಪ್ಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸಬೇಕೆಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದು, ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರ ಅರ್ಜಿ ಸಲ್ಲಿಸುವಂತೆ ಆಟೋ ಚಾಲಕರಲ್ಲಿ ಮನವಿ ಮಾಡಿದರು.

ಲಾಕ್ಡೌನ್ನಿಂದಾಗಿ ಆಟೋ ಚಾಲಕರು ಹಸಿವನ್ನು ನೀಗಿಸುವ ದೃಷ್ಠಿಯಿಂದ ಮುಖ್ಯ ಮಂತ್ರಿಗಳು ಪರಿಹಾರವನ್ನು ಘೋಷಿಸಿದ್ದು, ಪ್ರತಿಯೊಬ್ಬ ಆಟೋ ಚಾಲಕರನ್ನು ಗುರುತಿಸಿ ಪರಿಹಾರ ತಲುಪಿಸುವ ಕಾರ್ಯವಾಗಬೇಕು ಹಾಗೂ ಯಾವುದೇ ಆಟೋ ಚಾಲಕರನ್ನು ಕೈ ಬಿಡದೇ ನಿರ್ಲಕ್ಷಿಸಬಾರದು ಎಂದರು.
ಕರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಗರದ ಅಭಿನಂದಿಸಿದರು.
ಕೆ.ಎಸ್.ಚಿದಾನಂದ, ಪಂಚಾಕ್ಷರಿ, ಭೋಜರಾಜ್, ದಯಾನಂದ್, ಮಂಜುನಾಥ್, ರಾಜು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






