ಶಿವಮೊಗ್ಗದಲ್ಲಿ ಸಚಿವರ ಸಿಟಿ ರೌಂಡ್ಸ್, ಮನವಿ ಮಾಡಿ ಅಂಗಡಿ ಬಾಗಿಲು ಬಂದ್ ಮಾಡಿಸಿದ ಮಿನಿಸ್ಟರ್, ಎಲ್ಲಿಗೆಲ್ಲ ಭೇಟಿ ನೀಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ನಗರದ ವಿವಿಧೆಡೆ ಭೇಟಿ ನೀಡಿದರು. ಈ ವೇಳೆ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದವರಿಗೆ ಮನವಿ ಮಾಡಿ, ಬಾಗಿಲು ಹಾಕಿಸಿದರು.

ಕರೋನ ವೈರಸ್ ಹರಡದಂತೆ ತಡೆಯಲು ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ಸಚಿವ ಈಶ್ವರಪ್ಪ ಅವರು ಸಿಟಿ ರೌಂಡ್ಸ್ ಹಾಕಿದರು. ಮೊದಲು ಗಾಂಧಿ ಬಜಾರ್’ಗೆ ತೆರಳಿದ ಅವರು, ಅಗತ್ಯ ವಸ್ತು ಅಲ್ಲದಿದ್ದರು ಅಂಗಡಿ ಬಾಗಿಲು ತೆಗೆದು ವ್ಯಾಪಾರ ಮಾಡುತ್ತಿರುವುದನ್ನು ಗಮನಿಸಿದರು. ಅಂಗಡಿ ಮಾಲೀಕರಿಗೆ ಕೈ ಮುಗಿದು ಬಾಗಿಲು ಹಾಕುವಂತೆ ಮನವಿ ಮಾಡಿದರು.

ಗಾಂಧಿ ಬಜಾರ್’ನ ತರಕಾರಿ ಮಾರುಕಟ್ಟೆಗು ಸಚಿವರು ಭೇಟಿ ನೀಡಿದರು. ಕರೋನ ಯಾರಿಗೆ ಬಂದರೂ ಸಮಸ್ಯೆ ಆಗಲಿದೆ ಎಂದು ಕೆಲವು ಅಂಗಡಿ ಮಾಲೀಕರಿಗೆ ತಿಳಿಸಿ, ಕೂಡಲೇ ಬಾಗಿಲು ಹಾಕಿ ಎಂದರು.

https://www.facebook.com/liveshivamogga/videos/2299124960381441/?t=0

ಬಳಿಕ ವಿನೋಬನಗರದ ಇಂದಿರಾ ಕ್ಯಾಂಟೀನ್’ಗೆ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕ್ಯಾಂಟೀನ್’ನಲ್ಲಿ ಊಟ ಮತ್ತು ತಿಂಡಿಯ ವಿವರ ಪಡೆದರು. ಅಲ್ಲಿಂದ ಎಪಿಎಂಸಿ ಮಾರುಕಟ್ಟೆಗೆ ತೆರಳಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಜಿಲ್ಲಾ ಪಂಚಾಯಿತಿ ಸದಸ್ಯ ಕಾಂತೇಶ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

90263974 834544967025415 964356819516391424 o.jpg? nc cat=104& nc sid=110474& nc ohc=1YuGdkl83ykAX KNVdP& nc ht=scontent.fblr4 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment